25.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಸಂಭ್ರಮ: ತರಗತಿ ಕೊಠಡಿ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ

ಬಂದಾರು : ಇಲ್ಲಿನ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ ವರ್ಷಾಚರಣೆಯ ಸವಿನೆನಪಿಗಾಗಿ ಹಿರಿಯ ವಿದ್ಯಾರ್ಥಿಗಳು, ಎಸ್.ಡಿ. ಎಂ.ಸಿ. ಮತ್ತು ಊರ ವಿದ್ಯಾಭಿಮಾನಿಗಳ ಸಹಕಾರದೊಂದಿಗೆ 26 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಉದ್ದೇಶಿತ ತರಗತಿ ಕೊಠಡಿ ಕಾಮಗಾರಿಗೆ ಶಂಕು ಸ್ಥಾಪನೆ ಕಾರ್ಯಕ್ರಮವು ಜೂ.29ರಂದು ನೆರವೇರಿತು.

ಅರ್ಚಕರಾದ ಪ್ರಶಾಂತ ಹೊಳ್ಳ ಅವರು ವೈದಿಕ ವಿಧಿವಿಧಾನಗಳನ್ನು ನೆರವೇರಿಸಿ ಹಿರಿಯ ವಿದ್ಯಾರ್ಥಿ, ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಪಿ.ತಿಮ್ಮಯ್ಯ ಗೌಡ ಅವರು ಶಿಲಾನ್ಯಾಸಗೈದರು.

ಈ ಸಂದರ್ಭ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗುರುಪ್ರಸಾದ್ , ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಕೃಷ್ಣಯ್ಯ ಆಚಾರ್ಯ, ಉಪಾಧ್ಯಕ್ಷ ವೆಂಕಪ್ಪ ಪಿ.ಎಸ್., ಎಸ್ ಡಿ ಎಂ ಸಿ ಅಧ್ಯಕ್ಷರಾದ ಪ್ರಶಾಂತ್ ನಿರುಂಬುಡ, ನಿವೃತ್ತ ಶಿಕ್ಷಕಿ ರೇವತಿ ಅನಾಬೆ, ಹಿರಿಯ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಬಾಬಿ ಗೌಡ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರಸಾದ್ ಅಂಡಿಲ, ಕೋಶಾಧಿಕಾರಿ ಯಶೋಧಾ, ಹಿರಿಯ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಮೀನಾಕ್ಷಿ ಎಸ್ ಡಿ ಎಂ ಸಿ, ಅಮೃತ ಮಹೋತ್ಸವ ಸಮಿತಿ , ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಸದಸ್ಯರು, ಪೋಷಕರು, ಶಿಕ್ಷಕ ವೃಂದದವರು ಇದ್ದರು.

Related posts

ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲಾ ಸಂಸತ್ತು ಚುನಾವಣೆ

Suddi Udaya

ರಾಜ್ಯಮಟ್ಟದ ಪರೀಕ್ಷೆಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆಗೆ ಉಪ ಪ್ರಾಂಶುಪಾಲರಿಂದ ಮೆಚ್ಚುಗೆ

Suddi Udaya

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya
error: Content is protected !!