July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಪಡ್ಲಾಡಿ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡ ಮರ, ಕಸ-ಕಡ್ಡಿ ತೆರವು: ಸ್ಪಂದಿಸಿದ ಲಾಯಿಲ ಗ್ರಾ. ಪಂ. ಕಾರ್ಯಕ್ಕೆ ಮೆಚ್ಚುಗೆ

ಬೆಳ್ತಂಗಡಿ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನದಿ ಸೇರಿದಂತೆ ಹಳ್ಳ , ತೋಡುಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಲಾಯಿಲ ಗ್ರಾಮದ ಪಡ್ಲಾಡಿ ಸಮೀಪ ಹರಿಯುತ್ತಿರುವ ಸೋಮವತಿ ಉಪನದಿಯಲ್ಲಿ ಇರುವ ಕಿಂಡಿ ಅಣೆಕಟ್ಟಿನಲ್ಲಿ ಮರ ಕಸ ಕಡ್ಡಿಗಳು ಸಿಲುಕಿ ನೀರು ಸರಾಗವಾಗಿ ಹರಿಯಲು ಸಮಸ್ಯೆಯಾಗಿ ಪಕ್ಕದ ಕೃಷಿ ಪ್ರದೇಶಗಳಿಗೆ ನೀರು ನುಗ್ಗುವ ಸಂಭವ ಇದ್ದು ಈ ಬಗ್ಗೆ ಸ್ಥಳೀಯರು ಮಾಜಿ ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ ಗಮನಕ್ಕೆ ತಂದಾಗ ಅವರು ಲಾಯಿಲ ಗ್ರಾಮ ಪಂಚಾಯತ್ ಗೆ ಈ ಬಗ್ಗೆ ಮಾಹಿತಿ ನೀಡಿ ತಕ್ಷಣ ತೆರವುಗೊಳಿಸುವ ಬಗ್ಗೆ ಅಧಿಕಾರಿಗಳಲ್ಲಿ ಮನವಿ ಮಾಡಿದ್ದು,

ಈ ಬಗ್ಗೆ ಪಂಚಾಯತ್ ಅಧಿಕಾರಿಗಳು ಸ್ಪಂದಿಸಿ ಪಂಚಾಯತ್ ವತಿಯಿಂದ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿದ ಮರ ಸೇರಿದಂತೆ ಇನ್ನಿತರ ಕಸ ಕಡ್ಡಿಗಳನ್ಬು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಿದ್ದಾರೆ. ಮನವಿಗೆ ಸ್ಪಂದಿಸಿದ ಪ್ರಸಾದ್ ಶೆಟ್ಟಿ ಹಾಗೂ ಪಂಚಾಯತ್ ಅಧಿಕಾರಿಗಳ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಡಿ.21-22: ಬದನಾಜೆ ಶಾಲೆಯ ಅಮೃತ ಮಹೋತ್ಸವ ಸಂಭ್ರಮ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಲಾರಿ ಮತ್ತು ಕಾರು ಡಿಕ್ಕಿ: ನಾಲ್ವರಿಗೆ ಗಾಯ

Suddi Udaya

ವೇಣೂರು ಶ್ರೀ ಗಣೇಶೋತ್ಸವ ಬೆಳ್ಳಿ ಹಬ್ಬ: ಎಕ್ಸೆಲ್ ಕಾಲೇಜು ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಂದ ಲಾಂಛನ ಅನಾವರಣ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳ ನೇಮಕ

Suddi Udaya

ನಡ: ತಾಲೂಕು ಮಟ್ಟದ ವಿಜ್ಞಾನ ಮೇಳ

Suddi Udaya

ಕರಂಬಾರು: ಕಾಜಿಮುಗೇರು ಗೇರು ತೋಟಕ್ಕೆ ಬೆಂಕಿ

Suddi Udaya
error: Content is protected !!