23.6 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹದಗೆಟ್ಟಿರುವ ಸುಲ್ಕೇರಿಯ ದೇರಂಡೋಡಿ ಮತ್ತು ದೇವರಗುಡ್ಡೆ ರಸ್ತೆ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

ಸುಲ್ಕೇರಿ: 1982 ರಿಂದ ಇಂದಿನವರೆಗೂ ನಾವರದ ದೇರಂಡೋಡಿ, ರಾಜಪಾದೆ ಮತ್ತು ದೇವರಗುಡ್ಡೆಯ ರಸ್ತೆಯು ಯಾವುದೇ ಅಭಿವೃದ್ಧಿ ಕಾಣದೆ ಅದೇ ದುಸ್ಥಿತಿಯಲ್ಲಿದೆ. ಮಳೆ ಬಂದರೆ ರಸ್ತೆ ಸಂಪೂರ್ಣ ಕೆಸರುಮಯವಾಗಿ ವಾಹನ ಸಂಚಾರಕ್ಕೂ, ಶಾಲಾ ಮಕ್ಕಳಿಗೂ, ಹಿರಿಯ ನಾಗರಿಕರಿಗೂ ತೀವ್ರ ತೊಂದರೆಯಾಗುತ್ತದೆ.

ಕಳೆದ ವಿಧಾನಸಭಾ ಚುನಾವಣೆಯ ವೇಳೆ ಈ ರಸ್ತೆಯನ್ನು ಕಾಂಕ್ರೀಟ್ ರಸ್ತೆಯಾಗಿ ನಿರ್ಮಿಸಲು ರೂ.30 ಲಕ್ಷ ಅನುದಾನ ಘೋಷಿಸಲಾಗಿದೆ ಎಂದು ಹೇಳಲಾಗಿತ್ತು. ಆದರೆ ಇಂದಿಗೂ ಕಾಮಗಾರಿ ಆರಂಭವಾಗಿಲ್ಲ. ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತಕ್ಷಣ ಗಮನಹರಿಸಿ. ಸುಲ್ಕೇರಿಮೊಗ್ರು ಗ್ರಾಮ ಮತ್ತು ನಾವರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಾದ ಕಲ್ಪಿಲದಿಂದ – ದೇವರಗುಡ್ಡೆಯವರೆಗಿನ ರಸ್ತೆಯನ್ನು ಶೀಘ್ರದಲ್ಲೇ ಕಾಂಕ್ರೀಟ್ ರಸ್ತೆಯಾಗಿ ನಿರ್ಮಿಸಿ ಗ್ರಾಮಸ್ಥರ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Related posts

ನೆರಿಯ: ಕುಡುಮಡ್ಕನಿವಾಸಿ ಶ್ರೀಮತಿ ಜಯಲಕ್ಷ್ಮಿ ನಿಧನ

Suddi Udaya

ಬಂದಾರು: ಶಿವ ಫ್ರೆಂಡ್ಸ್ ಕುರಾಯ ಖಂಡಿಗ ಆಶ್ರಯದಲ್ಲಿ ವಲಯ ಮಟ್ಟದ ಲೀಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, ವಿವಿಧ ಸಾಧಕರಿಗೆ ಸನ್ಮಾನ

Suddi Udaya

ವಾಣಿ ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Suddi Udaya

ವೇಣೂರು ಗೋಳಿದಡ್ಕ ನಿವಾಸಿ ಮಂಜಪ್ಪ ದೇವಾಡಿಗ ನಿಧನ

Suddi Udaya

ಬೆಳ್ತಂಗಡಿ ಹಾಗೂ ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ: ಬೆಳ್ತಂಗಡಿ ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya
error: Content is protected !!