July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹದಗೆಟ್ಟಿರುವ ಸುಲ್ಕೇರಿಯ ದೇರಂಡೋಡಿ ಮತ್ತು ದೇವರಗುಡ್ಡೆ ರಸ್ತೆ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

ಸುಲ್ಕೇರಿ: 1982 ರಿಂದ ಇಂದಿನವರೆಗೂ ನಾವರದ ದೇರಂಡೋಡಿ, ರಾಜಪಾದೆ ಮತ್ತು ದೇವರಗುಡ್ಡೆಯ ರಸ್ತೆಯು ಯಾವುದೇ ಅಭಿವೃದ್ಧಿ ಕಾಣದೆ ಅದೇ ದುಸ್ಥಿತಿಯಲ್ಲಿದೆ. ಮಳೆ ಬಂದರೆ ರಸ್ತೆ ಸಂಪೂರ್ಣ ಕೆಸರುಮಯವಾಗಿ ವಾಹನ ಸಂಚಾರಕ್ಕೂ, ಶಾಲಾ ಮಕ್ಕಳಿಗೂ, ಹಿರಿಯ ನಾಗರಿಕರಿಗೂ ತೀವ್ರ ತೊಂದರೆಯಾಗುತ್ತದೆ.

ಕಳೆದ ವಿಧಾನಸಭಾ ಚುನಾವಣೆಯ ವೇಳೆ ಈ ರಸ್ತೆಯನ್ನು ಕಾಂಕ್ರೀಟ್ ರಸ್ತೆಯಾಗಿ ನಿರ್ಮಿಸಲು ರೂ.30 ಲಕ್ಷ ಅನುದಾನ ಘೋಷಿಸಲಾಗಿದೆ ಎಂದು ಹೇಳಲಾಗಿತ್ತು. ಆದರೆ ಇಂದಿಗೂ ಕಾಮಗಾರಿ ಆರಂಭವಾಗಿಲ್ಲ. ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತಕ್ಷಣ ಗಮನಹರಿಸಿ. ಸುಲ್ಕೇರಿಮೊಗ್ರು ಗ್ರಾಮ ಮತ್ತು ನಾವರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಾದ ಕಲ್ಪಿಲದಿಂದ – ದೇವರಗುಡ್ಡೆಯವರೆಗಿನ ರಸ್ತೆಯನ್ನು ಶೀಘ್ರದಲ್ಲೇ ಕಾಂಕ್ರೀಟ್ ರಸ್ತೆಯಾಗಿ ನಿರ್ಮಿಸಿ ಗ್ರಾಮಸ್ಥರ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Related posts

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

Suddi Udaya

ನಿಂತಿದ್ದ ಸ್ಕೂಟರಿಗೆ ಆಟೋ ರಿಕ್ಷಾ ಡಿಕ್ಕಿ: ಸ್ಕೂಟರ್ ಸವಾರನಿಗೆ ಗಾಯ

Suddi Udaya

ಬಂಗಾಡಿ ರವಿರಾಜ ಬಳ್ಳಾಲ್ ಅವರ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ದಾಖಲಾತಿ ಆರಂಭ

Suddi Udaya

ನಾರಾವಿ: ಮರಕ್ಕೆ ಡಿಕ್ಕಿ ಹೊಡೆದ ಬೈಕ್ – ಇಬ್ಬರು ಸ್ಥಳದಲ್ಲಿಯೇ ಸಾವು

Suddi Udaya

ಕಲ್ಮಂಜ: ದೇವರಗುಡ್ಡೆ ನಿವಾಸಿ ಪುರಂದರ ಹೆಗ್ಡೆ ನಿಧನ

Suddi Udaya
error: Content is protected !!