ಬೆಳ್ತಂಗಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುದ್ರಡ್ಕದಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಸಮಾರಂಭದ ಅಧ್ಯಕ್ಷತೆಯನ್ನು ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ನಿಸಾರುದ್ದೀನ್ ವಹಿಸಿದ್ದರು. ಗಿಡಕ್ಕೆ ನೀರೆರೆಯುವ ಮೂಲಕ ಗ್ರಾ.ಪಂ ಮಾಜಿ ಅಧ್ಯಕ್ಷ ಸದಾನಂದ ಶೆಟ್ಟಿ ಮಡಪ್ಪಾಡಿ ಹಾಗೂ ವೇದಿಕೆಯಲ್ಲಿದ್ದ ಇತರ ಗಣ್ಯರು ಉದ್ಘಾಟಿಸಿದರು.
ಶಾಲಾ ಮುಖ್ಯೋಪಾಧ್ಯಾಯ ಚೇತನ್ ಕುಮಾರ್ ಸ್ವಾಗತಿಸಿ, ಪ್ರಸ್ತಾಪವನೆ ನಡೆಸಿಕೊಟ್ಟರು. ಮುಖ್ಯ ಅತಿಥಿಗಳಾಗಿ ಪ್ರಮೋದ್ ಬಳ್ಳಮಂಜ, ಸುಧೀರ್ ಶೆಟ್ಟಿ ಬಳ್ಳಮಂಜ, ಸಿಆರ್ಪಿ ಚೇತನಾ, ಪುರುಷೋತ್ತಮ್ ಶೆಟ್ಟಿ, ಶಿವರಾಮ ಆಚಾರ್ಯ, ಹೈದರ್ ಪೈಝಿ, ಸಮದ್ ಮೈಸೂರು, ಸುಲೈಮಾನ್ ಕುದ್ರಡ್ಕ, ಲತೀಫ್ ಕುದ್ರಡ್ಕ, ನಿಸಾರ್ ಕುದ್ರಡ್ಕ, ಮುತ್ತಪ್ಪ ಪೂಜಾರಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನವಾಝ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಅತಿಥಿ ಶಿಕ್ಷಕಿ ಸ್ವಾತಿ ಹಾಗೂ ಸುಮತಿ ಕಾರ್ಯಕ್ರಮ ನಿರೂಪಿಸಿದರು. ಗೌರವ ಶಿಕ್ಷಕಿ ಸಮೀನಾ ಧನ್ಯವಾದವಿತ್ತರು.
ಕಾರ್ಯಕ್ರಮದ ಎಲ್ಲಾ ವ್ಯವಸ್ಥೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನವಾಝ್ ಅವರ ಮುಂದಾಳತ್ವದಲ್ಲಿ ಯಶಸ್ವಿಯಾಗಿ ನಿರ್ವಹಿಸಲಾಯಿತು.














