29.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಭಜನಾ ಕಾರ್ಯಕ್ರಮ

ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಭಜನಾ ಕಾರ್ಯಕ್ರಮವನ್ನು ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ. ಎನ್. ಜನಾರ್ದನ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ದಿನನಿತ್ಯದ ಒತ್ತಡ, ಆತಂಕಗಳನ್ನು ದೂರ ಮಾಡಿ ಮನಸ್ಸಿಗೆ ನೆಮ್ಮದಿ ನೀಡುತ್ತದೆ. ಭಜನೆ ನಡೆಯುವ ಸ್ಥಳದಲ್ಲಿ ಧನಾತ್ಮಕ ಕಂಪನಗಳು ಸೃಷ್ಟಿಯಾಗುತ್ತವೆ. ದೇವರ ನಾಮದ ಕಡೆಗೆ ಗಮನ ಹರಿಸುವುದರಿಂದ ಮೆದುಳಿನ ಏಕಾಗ್ರತೆ ಮತ್ತು ಸ್ಮರಣಶಕ್ತಿ ಉತ್ತಮಗೊಳ್ಳುತ್ತದೆ ಎಂದರು. ಭಜನಾ ಪರಿಷತ್ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಮಾತನಾಡಿ ಸಮೂಹ ಭಜನೆಗಳಲ್ಲಿ ಜಾತಿ, ಮತ ಭೇದವಿಲ್ಲದೆ ಎಲ್ಲರೂ ಒಟ್ಟಾಗಿ ಹಾಡುವುದರಿಂದ ಸಮಾಜದಲ್ಲಿ ಸೌಹಾರ್ದತೆ ಬೆಳೆಯುತ್ತದೆ. ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿ, ಭಾಷೆ ಮತ್ತು ಧಾರ್ಮಿಕ ಮೌಲ್ಯಗಳನ್ನು ಪರಿಚಯಿಸಲು ಭಜನೆ ಸರಳ ಮಾರ್ಗವಾಗಿದೆ.ನಿರಂತರ ಭಜನೆ ನಡೆಯಲಿ ಎಂದರು.

ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿಗಳಾದ ಸಂತೋಷ್ ಪಿ ಅಳಿಯೂರು, ಸಿರಿ ಸಂಸ್ಥೆಯ ನಿರ್ದೆಶಕರಾದ ಪ್ರಸನ್ನ ಯು, ತಾಲೂಕು ಪರಿಷತ್ ಅಧ್ಯಕ್ಷರಾದ ರವಿರಾಜ್ ಚಾರ್ಮಾಡಿ, ಚಂದ್ರಶೇಖರ ಗೌಡ ಕಾರ್ಯದರ್ಶಿ ಭಜನಾ ಪರಿಷತ್ ಬೆಳ್ತಂಗಡಿ, ಗಣೇಶ್ ಕಣ್ಣಾಜೆ ಕೋಶಾಧಿಕಾರಿ,ಭಜನಾ ಸಂಚಾಲಕಿ ಪದ್ಮಾವತಿ ಹಾಗೂ ಸಿರಿ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.ಜೀವನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಹೈಕೋರ್ಟ್ ನಲ್ಲಿ ಅ.13 ಕ್ಕೆ ವಿಚಾರಣೆ ಮುಂದೂಡಿಕೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಹತ್ಯಡ್ಕ: ನಿವೃತ್ತ ಶಿಕ್ಷಕ ಮಹಾದೇವ ಹೆಬ್ಬಾರ್ ನಿಧನ

Suddi Udaya

ಫೆ. 2 : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಸಂಗ್ರಾಮ್; ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನ: ಪ್ರದೀಪ್ ಈಶ್ವರ್ ಭಾಗಿ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ: ಸಮಾರೋಪ ಸಮಾರಂಭ

Suddi Udaya

ಗುಂಡೂರಿ ಸ.ಕಿ.ಪ್ರಾ ಶಾಲೆಯ ನೂತನ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya
error: Content is protected !!