July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಭಜನಾ ಕಾರ್ಯಕ್ರಮ

ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಭಜನಾ ಕಾರ್ಯಕ್ರಮವನ್ನು ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ. ಎನ್. ಜನಾರ್ದನ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ದಿನನಿತ್ಯದ ಒತ್ತಡ, ಆತಂಕಗಳನ್ನು ದೂರ ಮಾಡಿ ಮನಸ್ಸಿಗೆ ನೆಮ್ಮದಿ ನೀಡುತ್ತದೆ. ಭಜನೆ ನಡೆಯುವ ಸ್ಥಳದಲ್ಲಿ ಧನಾತ್ಮಕ ಕಂಪನಗಳು ಸೃಷ್ಟಿಯಾಗುತ್ತವೆ. ದೇವರ ನಾಮದ ಕಡೆಗೆ ಗಮನ ಹರಿಸುವುದರಿಂದ ಮೆದುಳಿನ ಏಕಾಗ್ರತೆ ಮತ್ತು ಸ್ಮರಣಶಕ್ತಿ ಉತ್ತಮಗೊಳ್ಳುತ್ತದೆ ಎಂದರು. ಭಜನಾ ಪರಿಷತ್ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಮಾತನಾಡಿ ಸಮೂಹ ಭಜನೆಗಳಲ್ಲಿ ಜಾತಿ, ಮತ ಭೇದವಿಲ್ಲದೆ ಎಲ್ಲರೂ ಒಟ್ಟಾಗಿ ಹಾಡುವುದರಿಂದ ಸಮಾಜದಲ್ಲಿ ಸೌಹಾರ್ದತೆ ಬೆಳೆಯುತ್ತದೆ. ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿ, ಭಾಷೆ ಮತ್ತು ಧಾರ್ಮಿಕ ಮೌಲ್ಯಗಳನ್ನು ಪರಿಚಯಿಸಲು ಭಜನೆ ಸರಳ ಮಾರ್ಗವಾಗಿದೆ.ನಿರಂತರ ಭಜನೆ ನಡೆಯಲಿ ಎಂದರು.

ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿಗಳಾದ ಸಂತೋಷ್ ಪಿ ಅಳಿಯೂರು, ಸಿರಿ ಸಂಸ್ಥೆಯ ನಿರ್ದೆಶಕರಾದ ಪ್ರಸನ್ನ ಯು, ತಾಲೂಕು ಪರಿಷತ್ ಅಧ್ಯಕ್ಷರಾದ ರವಿರಾಜ್ ಚಾರ್ಮಾಡಿ, ಚಂದ್ರಶೇಖರ ಗೌಡ ಕಾರ್ಯದರ್ಶಿ ಭಜನಾ ಪರಿಷತ್ ಬೆಳ್ತಂಗಡಿ, ಗಣೇಶ್ ಕಣ್ಣಾಜೆ ಕೋಶಾಧಿಕಾರಿ,ಭಜನಾ ಸಂಚಾಲಕಿ ಪದ್ಮಾವತಿ ಹಾಗೂ ಸಿರಿ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.ಜೀವನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಹಳೆಪೇಟೆ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಯೂನಿರ್ವಸಿಟಿ ರಿಜಿಸ್ಟ್ರಾರ್ ಭೇಟಿ

Suddi Udaya

ಉಜಿರೆಯಲ್ಲಿ ಹಲಸು ಮತ್ತು ಹಣ್ಣಿನ ಮೇಳದ ಉದ್ಘಾಟನೆ

Suddi Udaya

ಬೆಳ್ತಂಗಡಿ ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ವತಿಯಿಂದ ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಮಹಾಸಭೆ,

Suddi Udaya

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರ ಖಂಡನೆ

Suddi Udaya
error: Content is protected !!