ಬೆಳ್ತಂಗಡಿ: ಶ್ರೀ ನಾಗಂಬಿಕಾ ದೇವಸ್ಥಾನ ಮತ್ತು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ ಮುಂಡೂರುನಲ್ಲಿ ಶ್ರೀ ನಾಗಬ್ರಹ್ಮ ದೇವರ ಪುನರ್ ಪ್ರತಿಷ್ಠಾ ಕಲಶೋತ್ಸವ ಜು.3 ರಂದು ವಿಜೃಂಭಣೆಯಿಂದ ಜರುಗಿತು.

ಜು.2 ಗುರುವಾರ ಸಂಜೆ ಗಂಟೆ 6 ರಿಂದ ದೀಪ ಪ್ರಜ್ವಲನೆ, ದೇವತಾ ಪ್ರಾರ್ಥನೆ, ಪಂಚಗವ್ಯ ಮೇಲನ, ಸಹಿತಾ ಸ್ವಸ್ತಿ ಪುಣ್ಯಾಹ ವಾಚನ, ಭೂವರಾಹ ಹೋಮ, ವಾಸ್ತು ಹೋಮ, ವಾಸ್ತುಬಲಿ, ಪ್ರಾಕಾರ ಬಲಿ, ಬಿಂಬಶುದ್ಧಿ, ಧಾನ್ಯಾದಿವಾಸ, ಆದಿವಾಸ ಹೋಮ, ಶಯನಾದಿವಾಸ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಮೊದಲಾದ ಕಾರ್ಯಕ್ರಮಗಳು ಜರುಗಿತು.


ಜು.3 ಶುಕ್ರವಾರ ಬೆಳಿಗ್ಗೆ ಗಂಟೆ 8.36ಕ್ಕೆ ನಾಗಬ್ರಹ್ಮ ದೇವರ ಪ್ರತಿಷ್ಠೆ, ಆಶ್ಲೇಷ ಬಲಿ, ತನು ತಂಬಿಲ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನದ ಆಡಳಿತ ಮೊಕ್ತೇಸರಾದ ರಾಜೀವ್, ನಾಗಾಂಭಿಕ ಭಜನಾ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿ ಪದಾಧಿಕಾರಿಗಳು, ಊರ ಹಾಗೂ ಪರವೂರುಗಳಿಂದ ಆಗಮಿಸಿದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಧನ್ಯತೆಯನ್ನು ಪಡೆದರು.














