July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮುಂಡೂರು ಶ್ರೀನಾಗಕಲ್ಲುರ್ಟಿ ಕ್ಷೇತ್ರದಲ್ಲಿ ಶ್ರೀನಾಗಬ್ರಹ್ಮ ದೇವರ ಪುನರ್ ಪ್ರತಿಷ್ಠಾ ಕಲಶೋತ್ಸವ

ಬೆಳ್ತಂಗಡಿ: ಶ್ರೀ ನಾಗಂಬಿಕಾ ದೇವಸ್ಥಾನ ಮತ್ತು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ ಮುಂಡೂರುನಲ್ಲಿ ಶ್ರೀ ನಾಗಬ್ರಹ್ಮ ದೇವರ ಪುನರ್ ಪ್ರತಿಷ್ಠಾ ಕಲಶೋತ್ಸವ ಜು.3 ರಂದು ವಿಜೃಂಭಣೆಯಿಂದ ಜರುಗಿತು.

ಜು.2 ಗುರುವಾರ ಸಂಜೆ ಗಂಟೆ 6 ರಿಂದ ದೀಪ ಪ್ರಜ್ವಲನೆ, ದೇವತಾ ಪ್ರಾರ್ಥನೆ, ಪಂಚಗವ್ಯ ಮೇಲನ, ಸಹಿತಾ ಸ್ವಸ್ತಿ ಪುಣ್ಯಾಹ ವಾಚನ, ಭೂವರಾಹ ಹೋಮ, ವಾಸ್ತು ಹೋಮ, ವಾಸ್ತುಬಲಿ, ಪ್ರಾಕಾರ ಬಲಿ, ಬಿಂಬಶುದ್ಧಿ, ಧಾನ್ಯಾದಿವಾಸ, ಆದಿವಾಸ ಹೋಮ, ಶಯನಾದಿವಾಸ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಮೊದಲಾದ ಕಾರ್ಯಕ್ರಮಗಳು ಜರುಗಿತು.


ಜು.3 ಶುಕ್ರವಾರ ಬೆಳಿಗ್ಗೆ ಗಂಟೆ 8.36ಕ್ಕೆ ನಾಗಬ್ರಹ್ಮ ದೇವರ ಪ್ರತಿಷ್ಠೆ, ಆಶ್ಲೇಷ ಬಲಿ, ತನು ತಂಬಿಲ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನದ ಆಡಳಿತ ಮೊಕ್ತೇಸರಾದ ರಾಜೀವ್, ನಾಗಾಂಭಿಕ ಭಜನಾ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿ ಪದಾಧಿಕಾರಿಗಳು, ಊರ ಹಾಗೂ ಪರವೂರುಗಳಿಂದ ಆಗಮಿಸಿದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಧನ್ಯತೆಯನ್ನು ಪಡೆದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ ವಲಯ ಉಪಾಧ್ಯಕ್ಷರಾಗಿ ಆಯ್ಕೆ

Suddi Udaya

ಕೊಕ್ಕಡ: ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಕಾಡು ಎಮ್ಮೆ: ಸವಾರರಿಗೆ ಗಾಯ

Suddi Udaya

ಶಿರ್ಲಾಲು: ಅಂಗಡಿಗೆ ಬಿದ್ದ ಬೃಹತ್ ಗಾತ್ರದ ಮರ, ಅಪಾರ ಹಾನಿ

Suddi Udaya

ಡಾ. ಎಂ. ಮೋಹನ್ ಆಳ್ವರಿಗೆ ರಾಷ್ಟ್ರೀಯ ಆಯುರ್ವೇದ ವಿದ್ಯಾಪೀಠದ ಫೆಲೋಶಿಪ್ ಗೌರವ

Suddi Udaya

ಹಿರಿಯ ಧರ್ಮಗುರು ಅಹ್ಮದ್ ಕುಂಞಿ ಮುಸ್ಲಿಯಾರ್ ಬೀಟಿಗೆ ನಿಧನ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯರಿಂದ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ

Suddi Udaya
error: Content is protected !!