25.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಸಂಭ್ರಮ: ತರಗತಿ ಕೊಠಡಿ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ

ಬಂದಾರು : ಇಲ್ಲಿನ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ ವರ್ಷಾಚರಣೆಯ ಸವಿನೆನಪಿಗಾಗಿ ಹಿರಿಯ ವಿದ್ಯಾರ್ಥಿಗಳು, ಎಸ್.ಡಿ. ಎಂ.ಸಿ. ಮತ್ತು ಊರ ವಿದ್ಯಾಭಿಮಾನಿಗಳ ಸಹಕಾರದೊಂದಿಗೆ 26 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಉದ್ದೇಶಿತ ತರಗತಿ ಕೊಠಡಿ ಕಾಮಗಾರಿಗೆ ಶಂಕು ಸ್ಥಾಪನೆ ಕಾರ್ಯಕ್ರಮವು ಜೂ.29ರಂದು ನೆರವೇರಿತು.

ಅರ್ಚಕರಾದ ಪ್ರಶಾಂತ ಹೊಳ್ಳ ಅವರು ವೈದಿಕ ವಿಧಿವಿಧಾನಗಳನ್ನು ನೆರವೇರಿಸಿ ಹಿರಿಯ ವಿದ್ಯಾರ್ಥಿ, ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಪಿ.ತಿಮ್ಮಯ್ಯ ಗೌಡ ಅವರು ಶಿಲಾನ್ಯಾಸಗೈದರು.

ಈ ಸಂದರ್ಭ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗುರುಪ್ರಸಾದ್ , ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಕೃಷ್ಣಯ್ಯ ಆಚಾರ್ಯ, ಉಪಾಧ್ಯಕ್ಷ ವೆಂಕಪ್ಪ ಪಿ.ಎಸ್., ಎಸ್ ಡಿ ಎಂ ಸಿ ಅಧ್ಯಕ್ಷರಾದ ಪ್ರಶಾಂತ್ ನಿರುಂಬುಡ, ನಿವೃತ್ತ ಶಿಕ್ಷಕಿ ರೇವತಿ ಅನಾಬೆ, ಹಿರಿಯ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಬಾಬಿ ಗೌಡ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರಸಾದ್ ಅಂಡಿಲ, ಕೋಶಾಧಿಕಾರಿ ಯಶೋಧಾ, ಹಿರಿಯ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಮೀನಾಕ್ಷಿ ಎಸ್ ಡಿ ಎಂ ಸಿ, ಅಮೃತ ಮಹೋತ್ಸವ ಸಮಿತಿ , ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಸದಸ್ಯರು, ಪೋಷಕರು, ಶಿಕ್ಷಕ ವೃಂದದವರು ಇದ್ದರು.

Related posts

ಏ.9: ನಾವರದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿಯಿಂದ “ನಾಗರತಿ” ಯಕ್ಷಗಾನ

Suddi Udaya

ಬೆಳ್ತಂಗಡಿ ಕಳ್ಳತನ ಪ್ರಕರಣ: ಬೆಳ್ತಂಗಡಿ ಪೊಲೀಸರಿಂದ ಅಂತರ್ ರಾಜ್ಯ ಕುಖ್ಯಾತ ಕಳ್ಳನ ಬಂಧನ

Suddi Udaya

ರೆಖ್ಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಪ್ರಕಟಣೆ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಸತ್ತು ಚುನಾವಣೆ

Suddi Udaya

ಸಿರಿ ಕೇಂದ್ರ ಕಚೇರಿಯಲ್ಲಿ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ವನಮಹೋತ್ಸವ

Suddi Udaya

ವೇಣೂರು: ಶ್ರೀ ಧ. ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಶಿಕ್ಷಕ ಸನತ್ ಕುಮಾರ್ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!