23.6 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಜೂ.29 ರಂದು ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇವರ ವತಿಯಿಂದ ಹತ್ತು ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣಾ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇದರ ಅಧ್ಯಕ್ಷರು ಮತ್ತು ಬೆಳಾಲು ಶಾಲೆಯ ಹಿರಿಯ ವಿದ್ಯಾರ್ಥಿಯಾದ ರೋಟೇರಿಯನ್ ಅಶೋಕ್ ಹೆಬ್ಬಾರ್ ಮಾತನಾಡಿ ಜೀವನದಲ್ಲಿ ಹಣ ಗಳಿಕೆಯೇ ಮುಖ್ಯವಲ್ಲ ಸಮಾಜಕ್ಕೆ ಸಹಾಯವಾಗುವ ಕನಸುಗಳನ್ನು ಕಟ್ಟಿಕೊಳ್ಳಬೇಕು ಇಂತಹ ಸೌಲಭ್ಯಗಳನ್ನು ಪಡೆದವರು ಸಮಾಜಕ್ಕೆ ಮರಳಿ ನೀಡುವ ಮನಸ್ಸು ಮತ್ತು ಅವಕಾಶಗಳು ಲಭ್ಯವಾಗಲಿ ಎಂದು ಬೈಸಿಕಲ್ ವಿತರಿಸಿ ಶುಭ ಹಾರೈಸಿದರು.

ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಮಾತನಾಡಿ ತನ್ನತನಕ್ಕಿಂತ ಮಿಗಿಲಾಗಿ ಸೇವೆಯನ್ನು ಮಾಡುವ ಮನಸ್ಸು ಎಲ್ಲರಿಗೂ ಒದಗಲಿ ಎಂದು ತಿಳಿಸಿ, ಬೈಸಿಕಲ್ ನೀಡಿದ ರೋಟರಿ ಕ್ಲಬ್ ಯಲಹಂಕದ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು.
ವೇದಿಕೆಯಲ್ಲಿ ಕಾರ್ಯದರ್ಶಿ ರೋಟೇರಿಯನ್ ಭಾಸ್ಕರ್ ಬಿ.ಎಂ, ಸದಸ್ಯರಾದ ರೋಟೇರಿಯನ್ ಸತೀಶ್ ಶೆಟ್ಟಿ, ರೋಟೇರಿಯನ್ ಜಯರಾಮ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶಶಿಧರ, ನಿಕಟಪೂರ್ವ ಅಧ್ಯಕ್ಷರಾದ ಗಣೇಶ್ ಕನಿಕ್ಕಿಲ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ರಾಜೇಶ್ ಗೌಡ ಕುರ್ಕಿಲ್, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಶಿಕ್ಷಕ ಸುಮನ್ ಯು.ಎಸ್. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಶಿಬಾಜೆ: ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಹಾಗೂ ಕ್ರೀಡಾ ಶಿಬಿರ ಉದ್ಘಾಟನೆ

Suddi Udaya

ಇಂದಬೆಟ್ಟು ಪಲ್ಲದಕೋಡಿ ನಿವಾಸಿ ಜಗದೀಶ್ ನಿಧನ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿಶ್ವ ದಾದಿಯರ ದಿನಾಚರಣೆ

Suddi Udaya

ಪಿಲ್ಯ ಗೋಳಿಕಟ್ಟೆಯಲ್ಲಿ ಕಾರು ಅಪಘಾತ

Suddi Udaya
error: Content is protected !!