23.6 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹದಗೆಟ್ಟಿರುವ ಸುಲ್ಕೇರಿಯ ದೇರಂಡೋಡಿ ಮತ್ತು ದೇವರಗುಡ್ಡೆ ರಸ್ತೆ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

ಸುಲ್ಕೇರಿ: 1982 ರಿಂದ ಇಂದಿನವರೆಗೂ ನಾವರದ ದೇರಂಡೋಡಿ, ರಾಜಪಾದೆ ಮತ್ತು ದೇವರಗುಡ್ಡೆಯ ರಸ್ತೆಯು ಯಾವುದೇ ಅಭಿವೃದ್ಧಿ ಕಾಣದೆ ಅದೇ ದುಸ್ಥಿತಿಯಲ್ಲಿದೆ. ಮಳೆ ಬಂದರೆ ರಸ್ತೆ ಸಂಪೂರ್ಣ ಕೆಸರುಮಯವಾಗಿ ವಾಹನ ಸಂಚಾರಕ್ಕೂ, ಶಾಲಾ ಮಕ್ಕಳಿಗೂ, ಹಿರಿಯ ನಾಗರಿಕರಿಗೂ ತೀವ್ರ ತೊಂದರೆಯಾಗುತ್ತದೆ.

ಕಳೆದ ವಿಧಾನಸಭಾ ಚುನಾವಣೆಯ ವೇಳೆ ಈ ರಸ್ತೆಯನ್ನು ಕಾಂಕ್ರೀಟ್ ರಸ್ತೆಯಾಗಿ ನಿರ್ಮಿಸಲು ರೂ.30 ಲಕ್ಷ ಅನುದಾನ ಘೋಷಿಸಲಾಗಿದೆ ಎಂದು ಹೇಳಲಾಗಿತ್ತು. ಆದರೆ ಇಂದಿಗೂ ಕಾಮಗಾರಿ ಆರಂಭವಾಗಿಲ್ಲ. ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತಕ್ಷಣ ಗಮನಹರಿಸಿ. ಸುಲ್ಕೇರಿಮೊಗ್ರು ಗ್ರಾಮ ಮತ್ತು ನಾವರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಾದ ಕಲ್ಪಿಲದಿಂದ – ದೇವರಗುಡ್ಡೆಯವರೆಗಿನ ರಸ್ತೆಯನ್ನು ಶೀಘ್ರದಲ್ಲೇ ಕಾಂಕ್ರೀಟ್ ರಸ್ತೆಯಾಗಿ ನಿರ್ಮಿಸಿ ಗ್ರಾಮಸ್ಥರ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Related posts

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕಸ್ತೂರಿ ರಂಗನ್ ವರದಿ ಸಚಿವರ ಹೇಳಿಕೆಗೆ ದ.ಕ ಮಲೆಕುಡಿಯ ಸಂಘ ತೀವ್ರ ಆಕ್ಷೇಪ

Suddi Udaya

ಸುಲ್ಕೇರಿಮೊಗ್ರು ಶಾಲಾಭಿವೃದ್ಧಿ ಸಮಿತಿಯಿಂದ ಅಳದಂಗಡಿ ಗ್ರಾ.ಪಂ. ನ ನೂತನ ಅಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ಗೊನೆ ಮುಹೂರ್ತ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ವಿಶೇಷ ಪೂಜೆ

Suddi Udaya

ಗಾಳಿ ಮಳೆಗೆ ಸವಣಾಲು ಬೇಬಿಯವರ ಮನೆಗೆ ಹಾನಿ

Suddi Udaya
error: Content is protected !!