July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹದಗೆಟ್ಟಿರುವ ಸುಲ್ಕೇರಿಯ ದೇರಂಡೋಡಿ ಮತ್ತು ದೇವರಗುಡ್ಡೆ ರಸ್ತೆ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

ಸುಲ್ಕೇರಿ: 1982 ರಿಂದ ಇಂದಿನವರೆಗೂ ನಾವರದ ದೇರಂಡೋಡಿ, ರಾಜಪಾದೆ ಮತ್ತು ದೇವರಗುಡ್ಡೆಯ ರಸ್ತೆಯು ಯಾವುದೇ ಅಭಿವೃದ್ಧಿ ಕಾಣದೆ ಅದೇ ದುಸ್ಥಿತಿಯಲ್ಲಿದೆ. ಮಳೆ ಬಂದರೆ ರಸ್ತೆ ಸಂಪೂರ್ಣ ಕೆಸರುಮಯವಾಗಿ ವಾಹನ ಸಂಚಾರಕ್ಕೂ, ಶಾಲಾ ಮಕ್ಕಳಿಗೂ, ಹಿರಿಯ ನಾಗರಿಕರಿಗೂ ತೀವ್ರ ತೊಂದರೆಯಾಗುತ್ತದೆ.

ಕಳೆದ ವಿಧಾನಸಭಾ ಚುನಾವಣೆಯ ವೇಳೆ ಈ ರಸ್ತೆಯನ್ನು ಕಾಂಕ್ರೀಟ್ ರಸ್ತೆಯಾಗಿ ನಿರ್ಮಿಸಲು ರೂ.30 ಲಕ್ಷ ಅನುದಾನ ಘೋಷಿಸಲಾಗಿದೆ ಎಂದು ಹೇಳಲಾಗಿತ್ತು. ಆದರೆ ಇಂದಿಗೂ ಕಾಮಗಾರಿ ಆರಂಭವಾಗಿಲ್ಲ. ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತಕ್ಷಣ ಗಮನಹರಿಸಿ. ಸುಲ್ಕೇರಿಮೊಗ್ರು ಗ್ರಾಮ ಮತ್ತು ನಾವರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಾದ ಕಲ್ಪಿಲದಿಂದ – ದೇವರಗುಡ್ಡೆಯವರೆಗಿನ ರಸ್ತೆಯನ್ನು ಶೀಘ್ರದಲ್ಲೇ ಕಾಂಕ್ರೀಟ್ ರಸ್ತೆಯಾಗಿ ನಿರ್ಮಿಸಿ ಗ್ರಾಮಸ್ಥರ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Related posts

ಶಿಬರಾಜೆಪಾದೆ: ಶ್ರೀಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ಡಿ.ಎಂ ಐಟಿ ಕಾಲೇಜು : ವಿವೇಕ ಜಾಗೃತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಫೆ 16: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಜಾತ್ರೋತ್ಸವ,ಫೆ 19 ಭೈರವಕಲ್ಲಿನ ಪುರುಷರಾಯ ಜಾತ್ರೆ

Suddi Udaya

ನಾವೂರುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ಬಿವೋಕ್ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಭೇಟಿ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮ

Suddi Udaya
error: Content is protected !!