27.4 C
ಪುತ್ತೂರು, ಬೆಳ್ತಂಗಡಿ
July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎನ್.ಎಸ್.ಗೋಖಲೆ ಸಂಸ್ಮರಣಾ ವಿದ್ಯಾನಿಧಿ ವಿತರಣೆ

ಉಜಿರೆ: ಮಕ್ಕಳನ್ನು ಪ್ರೋತ್ಸಾಹಿಸುವುದು ಹೆಮ್ಮೆಯ ವಿಚಾರ. ಇಂತಹ ಪ್ರೇರಣೆಯಿಂದ ಬೆಳವಣಿಗೆ ಸಾಧ್ಯ. ಯುವಜನತೆ ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಬೆಳೆಯ ಬೇಕಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎಸ್. ಆರ್. ಸತೀಶ್ಚಂದ್ರ ಹೇಳಿದರು.

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಮುಂಡಾಜೆ ಸನ್ಯಾಸಿಕಟ್ಟೆ ಶ್ರೀ ಪರಶುರಾಮ ದೇವಸ್ಥಾನ ದಲ್ಲಿ ಜು.2ರಂದು ಜರುಗಿದ ಎನ್.ಎಸ್ ಗೋಖಲೆ ಸಂಸ್ಕರಣಾ ವಿದ್ಯಾನಿಧಿ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಎನ್.ಎಸ್. ಗೋಖಲೆ ಸಹಕಾರಿ ಕ್ಷೇತ್ರಕ್ಕಾಗಿ ತಪಸ್ಸು ಮಾಡಿದವರು. ಇಂತಹ ಹಿರಿಯರ ಮಾರ್ಗದರ್ಶನದಲ್ಲಿ ಇಂದು ದೇಶದಲ್ಲಿ 8.50 ಲಕ್ಷ ಸಹಕಾರಿ ಸಂಘಗಳು ಕಾರ್ಯನಿರ್ವಹಿಸುತ್ತಿವೆ. ಸುಮಾರು 30 ಕೋಟಿ ಜನ ಸಹಕಾರಿ ಸಂಘದ ಸದಸ್ಯರಾಗಿದ್ದು, ಸಹಕಾರಿ ಸಂಸ್ಥೆಗಳು ಬಲಯುತವಿದ್ದ ಕಾರಣ ಗೌರವಯುತ ಜೀವನ ವ್ಯವಸ್ಥೆ ನಡೆಸುವಂತಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಕೆ. ಪ್ರಕಾಶ ನಾರಾಯಣ ಮಾತನಾಡಿ, ಶಿಕ್ಷಣ ಎಂಬುದು ಪೋಷಕರಿಗೆ ಹೊರೆಯಾಗ ಬಾರದು. ಈ ಉದ್ದೇಶದಿಂದ ಸಂಘದ ವತಿಯಿಂದ ರಿಯಾಯಿತಿ ಬಡ್ಡಿ ದರದಲ್ಲಿ ಸದಸ್ಯರ ಮಕ್ಕಳಿಗೆ ಶಿಕ್ಷಣ ಸಾಲವನ್ನು ನೀಡಲಾಗುತ್ತಿದೆ ಎಂದರು.

ಸನ್ಯಾಸಿಕಟ್ಟೆ ಶ್ರೀಪರಶುರಾಮ ದೇವಸ್ಥಾನದ ಆಡಳಿತ ಮೊಕ್ತೇಸರ ವಾಸುದೇವ ಗೋಖಲೆ ಶುಭಹಾರೈಸಿದರು.
ಕ್ಯಾಂಪ್ಕೊ ಕೃಷಿ ವಿಭಾಗದ ಕಾರ್ಯ ನಿರ್ವಾಹಕ ಅಧಿಕಾರಿ ಕೃಷ್ಣ ಎನ್.ಆರ್., ಡಿಜಿಎಂ ಗೋವಿಂದ ಭಟ್, ಜಿಲ್ಲಾ ಸಹಕಾರ ಯೂನಿಯನ್ ವಿ.ಹಿರೇಮಠ, ಸಂಘದ ನಿರ್ದೇಶಕರಾದ ವೆಂಕಟೇಶ್ವರ ಭಟ್, ಶಶಿಧರ ಕಲ್ಮಂಜ, ರಾಘವ ಕಲ್ದಂಜ, ಶಿವಪ್ರಸಾದ್ ಗೌಡ, ರವಿ ಪೂಜಾರಿ, ಅಜಯ್ ಕೆ.ಎ., ಅಶ್ವಿನಿ ಎ. ಹೆಬ್ಬಾರ್, ವೃತ್ತಿಪರ ನಿರ್ದೇಶಕರಾದ ನಾರಾಯಣ ಫಡಕೆ, ಬಾಬು ಗೌಡ ಉಪಸ್ಥಿತರಿದ್ದರು.
ಉಪಾಧ್ಯಕ್ಷ ರಾಘವ ಗೌಡ ಕೆ. ಸ್ವಾಗತಿಸಿದರು. ನಿರ್ದೇಶಕ ಚೆನ್ನಕೇಶವ ನಾಯ್ಕ ಮತ್ತು ಸಿಇಒ ಪ್ರಸನ್ನ ಪರಾಂಜಪೆ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿ ಸುಷ್ಮಾ ಹಾಗೂ ಅಶ್ವಿನ್ ನವಾಥೆ ವಿದ್ಯಾರ್ಥಿಗಳ ಪರಿಚಯ ನೀಡಿದರು.

Related posts

ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ಜಿಲ್ಲಾ ಅಧ್ಯಕ್ಷರಾಗಿ ತನುಷ್ ಎಂ. ಶೆಟ್ಟಿ ನೇಮಕ

Suddi Udaya

ಇಂದಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶಶಿಪ್ರಭಾ ಬಿ ಅವರಿಗೆ ನಿವೃತ್ತಿ

Suddi Udaya

ಸದ್ದು ಗದ್ದಲದೊಂದಿಗೆ ಪ್ರಾರಂಭಗೊಂಡ ಶಿರ್ಲಾಲು ಗ್ರಾಮಸಭೆ

Suddi Udaya

ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕ್ರೀಡಾ ಶಿಬಿರದ ಸಮಾರೋಪ ಸಮಾರಂಭ

Suddi Udaya

ಉಜಿರೆ ನಿನ್ನಿಕಲ್ಲು ಬಳಿ 30ಕೆ.ವಿ ವಿದ್ಯುತ್ ಘಟಕ ಸ್ಥಾಪನೆಯ ಬಗ್ಗೆ ವಿಧಾನ ಪರಿಷತ್ ಅಧಿವೇಶನಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!