25.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್.ಸಿ.ಆರ್. ಇಂಡಿಯನ್ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ “ಯಶಸ್ವಿ ನಿರ್ವಹಣಾ ತತ್ವಗಳ” ಕುರಿತು ವಿಶೇಷ ಮಾರ್ಗದರ್ಶನ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ವತಿಯಿಂದ ನಡೆಸಲ್ಪಡುವ ಎಲ್.ಸಿ.ಆರ್. ಇಂಡಿಯನ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ದಿನಾಂಕ 30-06-2026 ರಂದು ದ್ವಿತೀಯ ಪದವಿ ಪೂರ್ವ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ‘ನಿರ್ವಹಣೆಯ ತತ್ವಗಳು’ ವಿಷಯದ ಕುರಿತು ಶೈಕ್ಷಣಿಕ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ನಿರ್ವಹಣೆಯ ತತ್ವಗಳ ಬಗ್ಗೆ ಅರಿವು ಮೂಡಿಸುವುದು, ವಿಷಯದ ಮೇಲಿನ ಆಸಕ್ತಿಯನ್ನು ಹೆಚ್ಚಿಸುವುದು ಹಾಗೂ ಪ್ರಸ್ತುತಿಕರಣ ಕೌಶಲ್ಯವನ್ನು ಬೆಳೆಸುವ ಉದ್ದೇಶ ಹೊಂದಲಾಗಿತ್ತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನಿರ್ವಹಣೆಯ ವಿವಿಧ ತತ್ವಗಳನ್ನು ಸರಳವಾಗಿ ಹಾಗೂ ಆತ್ಮವಿಶ್ವಾಸದಿಂದ ಪ್ರಸ್ತುತಪಡಿಸಿದರು. ಇದರಿಂದ ವಿದ್ಯಾರ್ಥಿಗಳಲ್ಲಿ ವಿಷಯದ ಬಗ್ಗೆ ಹೆಚ್ಚಿನ ತಿಳುವಳಿಕೆ, ಆತ್ಮವಿಶ್ವಾಸ ಮತ್ತು ಸಾರ್ವಜನಿಕವಾಗಿ ಮಾತನಾಡುವ ಕೌಶಲ್ಯ ವೃದ್ಧಿಯಾಯಿತು.
ಕಾರ್ಯಕ್ರಮವನ್ನು ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀಮತಿ ದೀಕ್ಷಿತಾ ಎ. ಅವರು ಯಶಸ್ವಿಯಾಗಿ ನಡೆಸಿಕೊಟ್ಟರು.

Related posts

ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹದಾಕಾರದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಣಿಯೂರು ವಲಯದ ಮೈರೋಲ್ತಡ್ಕ, ಮೊಗ್ರು, ಬಂದಾರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಉಪ್ಪಿನಂಗಡಿ ನೇತ್ರಾವತಿ ನದಿ ಕೂಟೇಲು ಎಂಬಲ್ಲಿ ಪ್ರವಾಹದಲ್ಲಿ ತೇಲಿ ಬಂದ ಜಾನುವಾರು

Suddi Udaya

ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿ ಕೇಂದ್ರದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಮಕ್ಕಳ ಕುಣಿತ ಭಜನಾ ತಂಡದ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!