23.6 C
ಪುತ್ತೂರು, ಬೆಳ್ತಂಗಡಿ
August 21, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿ ಐದನೇ ತಿರುವಿನಲ್ಲಿ ಮರ ಬಿದ್ದು ಕಾರಿಗೆ ಹಾನಿ

ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯ ಐದನೇ ತಿರುವಿನಲ್ಲಿ ಮಳೆ-ಗಾಳಿಯ ಆರ್ಭಟಕ್ಕೆ ಭಾರಿ ಗಾತ್ರದ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಕಾರಿಗೆ ಹಾನಿ ಉಂಟಾದ ಘಟನೆ ಶನಿವಾರ ನಡೆದಿದೆ.

ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆಮರ ರಸ್ತೆ ಮಧ್ಯಭಾಗಕ್ಕೆ ಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡು, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಇದರಿಂದ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.ಮಾಹಿತಿ ತಿಳಿದ ತಕ್ಷಣ ಸಂಬಂಧಪಟ್ಟ ಇಲಾಖೆಯ ಸಿಬ್ಬಂದಿ ಹಾಗೂ ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಮರ ತೆರವು ಕಾರ್ಯಾಚರಣೆ ನಡೆಸಿದರು. ಬಳಿಕ ಸಂಚಾರವನ್ನು ಪುನಃ ಆರಂಭಿಸಲಾಯಿತು.ಘಟನೆಯಿಂದ ಕೆಲಕಾಲ ವಾಹನ ಸವಾರರು ಪರದಾಡುವಂತಾಯಿತು.

Related posts

ಸೋಜಾ ಎಲೆಕ್ಟ್ರಾನಿಕ್ಸ್ ಸಿಬ್ಬಂದಿ ರಮೇಶ್ ಅವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಇಂದಬೆಟ್ಟು: ಕಜೆ ಅಂಗನವಾಡಿ ಕೆಂದ್ರದಲ್ಲಿ ಶ್ರಮದಾನ

Suddi Udaya

ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನೆ

Suddi Udaya

ಕೇಂದ್ರ ಸರ್ಕಾರದ ದಮನಕಾರಿ ಕ್ರಮ ಪ್ರಜಾಪ್ರಭುತ್ವಕ್ಕೆ ಕಳಂಕ: ರಕ್ಷಿತ್ ಶಿವರಾಂ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ನ.8: ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
error: Content is protected !!