27.1 C
ಪುತ್ತೂರು, ಬೆಳ್ತಂಗಡಿ
July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಯಾ ವಿಶೇಷ ಶಾಲೆಯಲ್ಲಿ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳ ಮಾಸಿಕ ಸಭೆ

ಬೆಳ್ತಂಗಡಿ: ದಯಾ ವಿಶೇಷ ಶಾಲೆಯಲ್ಲಿ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳ ಮಾಸಿಕ ಸಭೆಯನ್ನು ಶಾಲೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಜು.03 ರಂದು ನಡೆಸಲಾಯಿತು.

ಸಭೆಯಲ್ಲಿ ಶಾಲೆಯ ಶೈಕ್ಷಣಿಕ ಚಟುವಟಿಕೆಗಳು, ವಿದ್ಯಾರ್ಥಿಗಳ ಕಲಿಕಾ ಪ್ರಗತಿ, ಪುನರ್ವಸತಿ ಕಾರ್ಯಕ್ರಮಗಳು, ಹಾಜರಾತಿ, ಶಾಲಾ ದಾಖಲೆಗಳ ನಿರ್ವಹಣೆ, ಸ್ವಚ್ಛತೆ ಹಾಗೂ ಸುರಕ್ಷತಾ ಕ್ರಮಗಳ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ಜೊತೆಗೆ ಜುಲೈ ತಿಂಗಳಲ್ಲಿ ನಡೆಯಲಿರುವ ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳು, ವಿಶೇಷ ದಿನಗಳ ಆಚರಣೆ, ಪೋಷಕರ ಸಹಭಾಗಿತ್ವ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಯೋಜನೆಗಳ ಕುರಿತು ಸಿಬ್ಬಂದಿಗಳೊಂದಿಗೆ ಅಭಿಪ್ರಾಯ ವಿನಿಮಯ ನಡೆಯಿತು.

ಶಾಲಾ ನಿರ್ದೇಶಕರು ಆದಂತಹ ವಂದನೀಯ ಫಾ| ವಿನೋದ್ ಮಸ್ಕರೆನ್ಹಸ್ ರವರು ಶಾಲೆಯ ಅಭಿವೃದ್ಧಿಗೆ ಎಲ್ಲ ಸಿಬ್ಬಂದಿಗಳು ತಂಡದ ಮನೋಭಾವದಿಂದ ಕಾರ್ಯನಿರ್ವಹಿಸುವಂತೆ ಕರೆ ನೀಡಲಾಯಿತು. ಸಭೆಯಲ್ಲಿ ಸಿಬ್ಬಂದಿಗಳು ತಮ್ಮ ಸಲಹೆ-ಸೂಚನೆಗಳನ್ನು ಹಂಚಿಕೊಂಡಿದ್ದು, ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣ ಹಾಗೂ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಬದ್ಧತೆಯಿಂದ ಕಾರ್ಯನಿರ್ವಹಿಸುವ ಸಂಕಲ್ಪ ವ್ಯಕ್ತಪಡಿಸಿದರು.

ಸಭೆಯಲ್ಲಿ ಶಾಲೆಯ ಎಲ್ಲಾ ವಿಶೇಷ-ಶಿಕ್ಷಕರು, ಆಪ್ತ ಸಮಾಲೋಚಕರು, ಫಿಜಿಯೋಥೆರಪಿಸ್ಟ್, ವಾಕ್ ಮತ್ತು ಶ್ರಾವಣ ತೆರಪಿಸ್ಟ್ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶಾಲಾ ವಿಶೇಷ ಶಿಕ್ಷಕಿ ಧನ್ಯ ಕೆ ವಿ ಸ್ವಾಗತಿಸಿ, ಶಿಕ್ಷಕಿಯಾದ ರಶ್ಮಿ ವಂದಿಸಿದರು.

Related posts

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಅಕ್ಬರ್ ಬೆಳ್ತಂಗಡಿ ಆಗ್ರಹ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಐಸಿಯು ವೆಂಟಿಲೇಟರ್‌ಗಳ ಉದ್ಘಾಟನೆ

Suddi Udaya

ಬಂದಾರು ಗ್ರಾ.ಪಂ. ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪ್ರಶಸ್ತಿ ಸ್ವೀಕಾರ

Suddi Udaya

ನವ ವರ್ಷ-ನವ ವಿಧ ಪರಿಕಲ್ಪನೆಯಡಿ ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya

ಉಜಿರೆ: ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ‘ನಾಂದಿ’ 2025 ತರಬೇತಿ ಕಾರ್ಯಕ್ರಮ

Suddi Udaya
error: Content is protected !!