23.6 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಪ್ರಾ.ಕೃ.ಪ.ಸ.ಸಂಘದ ವತಿಯಿಂದ ಅಡಕೆ ತೋಟ ನಿರ್ವಹಣೆ ಬಗ್ಗೆ ಸಂವಾದ ಕಾರ್ಯಕ್ರಮ

ಮುಂಡಾಜೆ: ಉತ್ತಮ ಗುಣಮಟ್ಟದ ಅಡಕೆಯ ಉಪಯೋಗದಿಂದ ಆರೋಗ್ಯಕ್ಕೆ ಯಾವುದೇ ಹಾನಿ ಉಂಟಾಗದು. ಅಡಕೆ ಆರೋಗ್ಯಕ್ಕೆ ಉತ್ತಮವಾಗಿದ್ದು ಇದಕ್ಕೆ ರಾಸಾಯನಿಕಗಳನ್ನು ಬೆರೆಸಿದಾಗ ಅಪಾಯ ಉಂಟಾಗುವ ಸಾಧ್ಯತೆ ಇದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎಸ್. ಆರ್. ಸತೀಶ್ಚಂದ್ರ ಹೇಳಿದರು.

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನ ವಠಾರದಲ್ಲಿ ಜರುಗಿದ ಅಡಕೆ ತೋಟ ನಿರ್ವಹಣೆ ಬಗ್ಗೆ ಕೃಷಿಕ ಸದಸ್ಯರೊಂದಿಗೆ ಕ್ಯಾಂಪ್ಕೊ ಸಹಕಾರದಲ್ಲಿ ನಡೆದ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಜು.2ರಂದು ಮಾತನಾಡಿದರು.

ಕೃಷಿಕರು ಒಂದೇ ಬೆಳೆಯನ್ನು ನಂಬದೇ ಮಿಶ್ರ ಕೃಷಿಯಲ್ಲಿ ತೊಡಗಿಸಿಕೊಳ್ಳುವುದು ಉತ್ತಮ. ಅಡಕೆ ಬಗ್ಗೆ ಷಡ್ಯಂತ್ರ ನಡೆಯುತ್ತಿರುವುದು ಗಮನಕ್ಕೆ ಬರುತ್ತಿದ್ದು ಇದರ ಬಗ್ಗೆ ಕ್ಯಾಂಪ್ಕೊ, ಅಡಕೆ ಮಾರುಕಟ್ಟೆ ನಿರ್ವಹಿಸುತ್ತಿರುವ ಇತರ ಸಂಸ್ಥೆಗಳು ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿವೆ. ಕಾಲದ ಬದಲಾವಣೆ ಹಾಗೂ ಹವಾಮಾನ ವೈಪರೀತ್ಯದಿಂದ ಅಡಕೆಯ ಗುಣಮಟ್ಟ ಕುಸಿಯುತ್ತಿರುವುದು ಕಂಡುಬರುತ್ತಿದೆ. ಈ ಬಗ್ಗೆ ಕೃಷಿಕರು ಹೆಚ್ಚಿನ ಮುಂಜಾಗ್ರತೆ ವಹಿಸುವುದು ಅಗತ್ಯ ಎಂದರು.

ಕ್ಯಾಂಪ್ಕೊ ಕೃಷಿ ವಿಭಾಗದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಎನ್. ಆರ್. ಅಡಕೆ ತೋಟ ನಿರ್ವಹಣೆ ಕುರಿತು, ಡಿಜಿಎಂ ಗೋವಿಂದ ಭಟ್ ಅಡಕೆ ಮಾರುಕಟ್ಟೆ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಕೃಷಿಕ ಸದಸ್ಯರು ಸಂವಾದದಲ್ಲಿ ಭಾಗವಹಿಸಿದರು.
ಮುಂಡಾಜೆ ಪ್ಯಾಕ್ಸ್ ಕೆ. ಪ್ರಕಾಶ ನಾರಾಯಣ್, ಉಪಾಧ್ಯಕ್ಷ ರಾಘವ ಗೌಡ ಕೆ., ಸಿಇಒ ಪ್ರಸನ್ನ ಪರಾಂಜಪೆ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.

Related posts

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಯಕ್ಷಸಂಭ್ರಮ ಉದ್ಘಾಟನೆ: ನಾಲ್ವರು ಯಕ್ಷಗಾನ ತರಬೇತಿ ಗುರುಗಳಿಗೆ ಗೌರವಾರ್ಪಣೆ: 8 ಶಾಲೆಗಳು 480 ಯಕ್ಷ ವಿದ್ಯಾರ್ಥಿಗಳಿಂದ ಯಕ್ಷಗಾನ ರಂಗಪ್ರವೇಶ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸ: ವಿ.ಪ. ಸದಸ್ಯ ಬಿ.ಕೆ. ಹರಿಪ್ರಸಾದ್ ರಿಗೆ ಆಹ್ವಾನ

Suddi Udaya

ಯಕ್ಷಭಾರತಿಯಿಂದ ಯಕ್ಷಗಾನ ಪ್ರದರ್ಶನ “ಇಂದ್ರಜಿತು ಕಾಳಗ”

Suddi Udaya

ವೇಣೂರಿನ ನವಚೇತನ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಪಂದ್ಯಾಟ: ಶರ್ವಿನ್ ಮೋನಿಸ್, ಸಾನ್ವಿ ಎಂ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಚಿಬಿದ್ರೆ ಇದರ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಜಿಪ್ಸಿ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಬಳಂಜ ಶಾಲಾ ಮುಖ್ಯೋಪಾಧ್ಯಾಯರಿಗೆ ಗಂಭೀರ ಗಾಯ

Suddi Udaya
error: Content is protected !!