25.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯ ದಸ್ತಗಿರಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಸೈಬರ್‌ ಅಪರಾಧ ಪೊಲೀಸ್ ಠಾಣಾ ಅ.ಕ್ರ. 104-2025, U/S 66(C), 66(D) IT Act -2008 ಮತ್ತು ಕಲಂ: 126 (2), 308(6), 318(4), 319(2), 3(5) BNS (ಡಿಜಿಟಲ್ ಅರೆಸ್ಟ್ ಪ್ರಕರಣ) ಪ್ರಕರಣದಲ್ಲಿ ಸೈಬರ್ ಅಪರಾಧಕ್ಕೆ ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಪಡೆದು, ಸೈಬರ್ ವಂಚನೆಯ ಹಣದ ವಹಿವಾಟಿಗೆ ನೀಡಿ ಸಹಕರಿಸುತ್ತಿದ್ದ ಆರೋಪಿ ಕೊಳ್ನಾಡು ಕುಡ್ತಮುಗೇರು ನಿವಾಸಿ ಜುಬೈರ್ (32) ಎಂಬಾತನನ್ನು ಜು. 03 ರಂದು ಜಿಲ್ಲಾ ಸೈಬರ್‌ ಅಪರಾಧ ಠಾಣೆಯ ಪೊಲೀಸರು ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿರುತ್ತದೆ.

ವಿಚಾರಣೆಯ ವೇಳೆ ಸದ್ರಿ ಆರೋಪಿಯ ವಿರುದ್ಧ ಪ್ರಕರಣ ಸೇರಿದಂತೆ ರಾಜ್ಯದ ಬೇರೆ ಬೇರೆ ಠಾಣೆಗಳಲ್ಲಿ ಒಟ್ಟು 10 ಪ್ರಕರಣಗಳು ದಾಖಲಾಗಿರುವ ಬಗ್ಗೆ ಹಾಗೂ ಆರೋಪಿಯು ಹಲವು ಪ್ರಕರಣಗಳಲ್ಲಿ ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ, ದಸ್ತಗಿರಿಗೆ ಸಿಗದೇ ತಲೆ ಮರೆಸಿಕೊಂಡಿರುವುದು ತಿಳಿದುಬಂದಿರುತ್ತದೆ.

Related posts

ಮರೋಡಿ: ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗರ್ಡಾಡಿ ಸೌಭಾಗ್ಯ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಪರೀಕ ಆತ್ರಾಡಿ ಮಸೀದಿಯಿಂದ ಶ್ರೀನಿವಾಸ ದೇವಸ್ಥಾನದವರೆಗೆ ಅಗಲೀಕರಣದೊಂದಿಗೆ ಡಾಮರೀಕರಣಕ್ಕೆ ಚಾಲನೆ

Suddi Udaya

ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಮಾತೃ ವಿಯೋಗ

Suddi Udaya

ಬೆಳ್ತಂಗಡಿ : ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ವರ್ಗಾವಣೆ: ಬೆಳ್ತಂಗಡಿ ಆರ್ ಎಫ್ ಓ ಆಗಿ ಮಹೇಶ್ ದೇವಾಡಿಗ ಅಧಿಕಾರ ಸ್ವೀಕಾರ

Suddi Udaya

ಗಾಳಿ ಮಳೆಗೆ ಹಾನಿಯಾದ ಓಡಿಲ್ನಾಳ ಕೃಷ್ಣಪ್ಪ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya
error: Content is protected !!