25.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರಿನಲ್ಲಿ ಎಸ್‌ಡಿಪಿಐ ವತಿಯಿಂದ ಎಸ್.ಐ.ಆರ್ ಹೆಲ್ಪ್‌ಡೆಸ್ಕ್ ಸೇವೆ ಆರಂಭ

ತೆಂಕಕಾರಂದೂರು: ಎಸ್‌ಡಿಪಿಐ ತೆಂಕಕಾರಂದೂರು ಬ್ರಾಂಚ್ ಸಮಿತಿಯ ವತಿಯಿಂದ ಪೆರಾಲ್ದರಕಟ್ಟೆಯಲ್ಲಿ SIR (Special Intensive Revision) ಹೆಲ್ಪ್‌ಡೆಸ್ಕ್ ಸೇವೆಗೆ ಚಾಲನೆ ನೀಡಲಾಯಿತು.

ಈ ಹೆಲ್ಪ್‌ಡೆಸ್ಕ್ ಮೂಲಕ ಮತದಾರರ ಪಟ್ಟಿಗೆ ಹೊಸ ಹೆಸರು ಸೇರ್ಪಡೆ, ಹೆಸರು ಹಾಗೂ ವಿಳಾಸ ತಿದ್ದುಪಡಿ, ಮತದಾರರ ವಿವರಗಳ ಪರಿಶೀಲನೆ ಸೇರಿದಂತೆ ಮತದಾರರ ಪಟ್ಟಿಗೆ ಸಂಬಂಧಿಸಿದ ಎಲ್ಲಾ ರೀತಿಯ ಮಾರ್ಗದರ್ಶನವನ್ನು ಸಾರ್ವಜನಿಕರಿಗೆ ಮುಂದಿನ ಒಂದು ತಿಂಗಳ ಅವಧಿಯವರೆಗೆ ಉಚಿತವಾಗಿ ನೀಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ, ಬಳಂಜ ಗ್ರಾಮ ಪಂಚಾಯತ್‌ನ ಎಸ್‌ಡಿಪಿಐ ಬೆಂಬಲಿತ ನಿಕಟಪೂರ್ವ ಸದಸ್ಯ ನಿಝಾಮ್ ಕಟ್ಟೆ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯ ಅಶ್ರಫ್ ಕಟ್ಟೆ, ತೆಂಕಕಾರಂದೂರು ಬ್ರಾಂಚ್ ಅಧ್ಯಕ್ಷ ನವಾಝ್ ಮಂಜೋಟ್ಟಿ ಹಾಗೂ ಪಕ್ಷದ ಕಾರ್ಯಕರ್ತರು, ನಾಗರಿಕರು ಮತ್ತು ಹಿತೈಷಿಗಳು ಉಪಸ್ಥಿತರಿದ್ದರು.

Related posts

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

Suddi Udaya

ಮಾ.15: ರಂಜನ್‌ ಜಿ. ಗೌಡ ನೇತೃತ್ವದ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ

Suddi Udaya

ಕೊಯ್ಯೂರಿನ ಮಹಿಳೆ ನಾಪತ್ತೆ; ದೂರು ದಾಖಲು

Suddi Udaya

ಶಿಬಾಜೆ ಸುರಕ್ಷಿತಾರಣ್ಯದ ಪಡಂತಾಜೆ ರಸ್ತೆ ಬದಿ 6 ತಿಂಗಳ ಪ್ರಾಯದ ಚಿರತೆ ಮರಿಯ ಶವ ಪತ್ತೆ

Suddi Udaya

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ನಗರಗಳಲ್ಲಿ ಬಿ -ಖಾತಾ ಆಂದೋಲನ: ಜನರ ಕಣ್ಣೊರೆಸುವ ತಂತ್ರ, ಖಜಾನೆ ತುಂಬಿಸುವ ಒಳತಂತ್ರ: ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಟೀಕೆ

Suddi Udaya
error: Content is protected !!