25.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಇದರ ವತಿಯಿಂದ ಜು.4 ರಂದು ಬೆಳ್ತಂಗಡಿ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆದ ಪತ್ರಿಕಾ ದಿನಾಚರಣೆಯನ್ನು ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕರಾಮ್ ಬಿ. ವಹಿಸಿದ್ದರು. ದಾಂಡೇಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಂದೇಶ್ ಜೈನ್ ವಿಶೇಷ ಉಪನ್ಯಾಸ ನೀಡಿದರು.

ಮುಖ್ಯ ಅತಿಥಿಗಳಾಗಿ ಮೆಸ್ಕಾಂ, ಮಂಗಳೂರು ಇದರ ಅಧ್ಯಕ್ಷ ಕೆ. ಹರೀಶ್ ಕುಮಾರ್, ಮಂಜುವಾಣಿ ಮಾಸಪತ್ರಿಕೆ ಸಂಪಾದಕ ಭಾಸ್ಕರ್ ಹೆಗಡೆ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಂಗಳೂರು ಇದರ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ತಾಲೂಕು ಪತ್ರಕರ್ತರ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಪತ್ರಕರ್ತರ ಸಂಘದ ಜಿಲ್ಲಾ ಗ್ರಾಮೀಣ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ ಭಾಗವಹಿಸಿದ್ದರು.


ಈ ಸಂದರ್ಭದಲ್ಲಿ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬೆಳ್ತಂಗಡಿ ತಾಲೂಕು ಸರಕಾರಿ ಕನ್ನಡ ಮಾಧ್ಯಮ ಶಾಲೆಗಳ ಸಾಧಕ ವಿದ್ಯಾರ್ಥಿಗಳನ್ನು ಸಂಘದ ವತಿಯಿಂದ ಅಭಿನಂದಿಸಲಾಯಿತು. ಪತ್ರಕರ್ತ ಮನೋಹರ ಇವರ ಪುತ್ರಿ ದಿತಿ ಇವರ ಸಾಂತ್ವಾನ ನಿಧಿಯಿಂದ ಅನಾರೋಗ್ಯ ಪೀಡಿತರ ಚಿಕಿತ್ಸೆಗೆ ನೆರವು ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ ಮಂಜುವಾಣಿ ಸಂಪಾದಕ ಭಾಸ್ಕರ ಹೆಗಡೆ ಹಾಗೂ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಇವರನ್ನು ಗೌರವಿಸಲಾಯಿತು.

ಪತ್ರಕರ್ತರ ಸಂಘದ ಕಾರ್ಯದರ್ಶಿ ಮನೋಹರ್ ಬಳಂಜ ಸ್ವಾಗತಿಸಿದರು. ಅಚುಶ್ರೀ ಬಾಂಗೇರು, ಸಂತೋಷ್ ಪಿ. ಕೋಟ್ಯಾನ್, ಬಿ.ಎಸ್ ಕುಲಾಲ್ ಸನ್ಮಾನಿತರನ್ನು ಪರಿಚರಿಸಿದರು. ಆಶ್ರಫ್ ಆಲಿಕುಂಞಿ ಕಾರ್ಯಕ್ರಮ ನಿರೂಪಿಸಿ, ಅರವಿಂದ ಹೆಬ್ಬಾರ್, ಮಂಜುನಾಥ ರೈ, ಧನಕೀರ್ತಿ ಆರಿಗ, ಹೃಷಿಕೇಶ್ ಧರ್ಮಸ್ಥಳ, ದೇವಿಪ್ರಸಾದ್, ಶ್ರೀನಿವಾಸ ತಂತ್ರಿ, ಪ್ರಸಾದ್ ಶೆಟ್ಟಿ, ಕೆ.ಎನ್ ಗೌಡ, ಸಂಜೀವ ಎನ್.ಸಿ, ಜಾರಪ್ಪ ಪೂಜಾರಿ, ಚಂದ್ರಹಾಸ ಚಾರ್ಮಾಡಿ ಶಾಸಕರು ಹಾಗೂ ಅತಿಥಿಗಳನ್ನು ಗೌರವಿಸಿದರು. ಸಂಘದ ಕಾರ್ಯದರ್ಶಿ ಶಿಬಿ ಧರ್ಮಸ್ಥಳ ಧನ್ಯವಾದವಿತ್ತರು.

Related posts

ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿದ ಗಮ್ಮತ್ ಹಾಗೂ ವಿವಿಧ ಕ್ರೀಡಾಕೂಟ

Suddi Udaya

ಹೊಸಂಗಡಿ: ಬಡಕೋಡಿ ನಿವಾಸಿ ಶ್ರೀಮತಿ ಸುಶೀಲ ನಿಧನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಡಾ. ಬಿ. ಯಶೋವರ್ಮರ ಜನ್ಮದಿನ ಸ್ಮರಣಾರ್ಥ ವಿಚಾರಸಂಕಿರಣ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎನ್‌ಡಿಆರ್‌ಎಫ್ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!