25.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಪ್ರಾ.ಕೃ.ಪ.ಸ.ಸಂಘದ ವತಿಯಿಂದ ಅಡಕೆ ತೋಟ ನಿರ್ವಹಣೆ ಬಗ್ಗೆ ಸಂವಾದ ಕಾರ್ಯಕ್ರಮ

ಮುಂಡಾಜೆ: ಉತ್ತಮ ಗುಣಮಟ್ಟದ ಅಡಕೆಯ ಉಪಯೋಗದಿಂದ ಆರೋಗ್ಯಕ್ಕೆ ಯಾವುದೇ ಹಾನಿ ಉಂಟಾಗದು. ಅಡಕೆ ಆರೋಗ್ಯಕ್ಕೆ ಉತ್ತಮವಾಗಿದ್ದು ಇದಕ್ಕೆ ರಾಸಾಯನಿಕಗಳನ್ನು ಬೆರೆಸಿದಾಗ ಅಪಾಯ ಉಂಟಾಗುವ ಸಾಧ್ಯತೆ ಇದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎಸ್. ಆರ್. ಸತೀಶ್ಚಂದ್ರ ಹೇಳಿದರು.

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನ ವಠಾರದಲ್ಲಿ ಜರುಗಿದ ಅಡಕೆ ತೋಟ ನಿರ್ವಹಣೆ ಬಗ್ಗೆ ಕೃಷಿಕ ಸದಸ್ಯರೊಂದಿಗೆ ಕ್ಯಾಂಪ್ಕೊ ಸಹಕಾರದಲ್ಲಿ ನಡೆದ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಜು.2ರಂದು ಮಾತನಾಡಿದರು.

ಕೃಷಿಕರು ಒಂದೇ ಬೆಳೆಯನ್ನು ನಂಬದೇ ಮಿಶ್ರ ಕೃಷಿಯಲ್ಲಿ ತೊಡಗಿಸಿಕೊಳ್ಳುವುದು ಉತ್ತಮ. ಅಡಕೆ ಬಗ್ಗೆ ಷಡ್ಯಂತ್ರ ನಡೆಯುತ್ತಿರುವುದು ಗಮನಕ್ಕೆ ಬರುತ್ತಿದ್ದು ಇದರ ಬಗ್ಗೆ ಕ್ಯಾಂಪ್ಕೊ, ಅಡಕೆ ಮಾರುಕಟ್ಟೆ ನಿರ್ವಹಿಸುತ್ತಿರುವ ಇತರ ಸಂಸ್ಥೆಗಳು ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿವೆ. ಕಾಲದ ಬದಲಾವಣೆ ಹಾಗೂ ಹವಾಮಾನ ವೈಪರೀತ್ಯದಿಂದ ಅಡಕೆಯ ಗುಣಮಟ್ಟ ಕುಸಿಯುತ್ತಿರುವುದು ಕಂಡುಬರುತ್ತಿದೆ. ಈ ಬಗ್ಗೆ ಕೃಷಿಕರು ಹೆಚ್ಚಿನ ಮುಂಜಾಗ್ರತೆ ವಹಿಸುವುದು ಅಗತ್ಯ ಎಂದರು.

ಕ್ಯಾಂಪ್ಕೊ ಕೃಷಿ ವಿಭಾಗದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಎನ್. ಆರ್. ಅಡಕೆ ತೋಟ ನಿರ್ವಹಣೆ ಕುರಿತು, ಡಿಜಿಎಂ ಗೋವಿಂದ ಭಟ್ ಅಡಕೆ ಮಾರುಕಟ್ಟೆ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಕೃಷಿಕ ಸದಸ್ಯರು ಸಂವಾದದಲ್ಲಿ ಭಾಗವಹಿಸಿದರು.
ಮುಂಡಾಜೆ ಪ್ಯಾಕ್ಸ್ ಕೆ. ಪ್ರಕಾಶ ನಾರಾಯಣ್, ಉಪಾಧ್ಯಕ್ಷ ರಾಘವ ಗೌಡ ಕೆ., ಸಿಇಒ ಪ್ರಸನ್ನ ಪರಾಂಜಪೆ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.

Related posts

ನಾಗೇಶ್ ಕುಮಾರ್ ಗೌಡ ರವರ ಅಭಿಮಾನಿ ಬಳಗದಿಂದ ಮಂಗಳೂರಿನ ಸಮಾಜ ಸೇವಕ ಪ್ರಮೋದ್ ಸಾಲಿಯಾನ್ ಬಲ್ಲಾಳ್ ಬಾಗ್ ಭೇಟಿ

Suddi Udaya

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಯುವ ಸಂಘಟಕ ರಾಕೇಶ್ ಹೆಗ್ಡೆ ಆಯ್ಕೆ

Suddi Udaya

ಬೃಂದಾವನ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ಗ್ರಾ.ಪಂ. ಕುಕ್ಕೇಡಿ ವತಿಯಿಂದ ನರೇಗಾ ಫಲಾನುಭವಿಗಳಿಗೆ ಗಿಡ ವಿತರಣೆ

Suddi Udaya

ಬೆಳ್ತಂಗಡಿ: ಹೀಲಿಯಂ ಗ್ಯಾಸ್ ಸೋರಿಕೆಯಿಂದಾಗಿ ಬೆಂಕಿ ಅವಘಡ ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ “ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ: ಇನ್ನೂ ಕೇವಲ ನಾಲ್ಕು ದಿನ ಮಾತ್ರ

Suddi Udaya
error: Content is protected !!