ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ವತಿಯಿಂದ ನಡೆಸಲ್ಪಡುವ ಎಲ್.ಸಿ.ಆರ್. ಇಂಡಿಯನ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ದಿನಾಂಕ 30-06-2026 ರಂದು ದ್ವಿತೀಯ ಪದವಿ ಪೂರ್ವ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ‘ನಿರ್ವಹಣೆಯ ತತ್ವಗಳು’ ವಿಷಯದ ಕುರಿತು ಶೈಕ್ಷಣಿಕ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ನಿರ್ವಹಣೆಯ ತತ್ವಗಳ ಬಗ್ಗೆ ಅರಿವು ಮೂಡಿಸುವುದು, ವಿಷಯದ ಮೇಲಿನ ಆಸಕ್ತಿಯನ್ನು ಹೆಚ್ಚಿಸುವುದು ಹಾಗೂ ಪ್ರಸ್ತುತಿಕರಣ ಕೌಶಲ್ಯವನ್ನು ಬೆಳೆಸುವ ಉದ್ದೇಶ ಹೊಂದಲಾಗಿತ್ತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನಿರ್ವಹಣೆಯ ವಿವಿಧ ತತ್ವಗಳನ್ನು ಸರಳವಾಗಿ ಹಾಗೂ ಆತ್ಮವಿಶ್ವಾಸದಿಂದ ಪ್ರಸ್ತುತಪಡಿಸಿದರು. ಇದರಿಂದ ವಿದ್ಯಾರ್ಥಿಗಳಲ್ಲಿ ವಿಷಯದ ಬಗ್ಗೆ ಹೆಚ್ಚಿನ ತಿಳುವಳಿಕೆ, ಆತ್ಮವಿಶ್ವಾಸ ಮತ್ತು ಸಾರ್ವಜನಿಕವಾಗಿ ಮಾತನಾಡುವ ಕೌಶಲ್ಯ ವೃದ್ಧಿಯಾಯಿತು.
ಕಾರ್ಯಕ್ರಮವನ್ನು ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀಮತಿ ದೀಕ್ಷಿತಾ ಎ. ಅವರು ಯಶಸ್ವಿಯಾಗಿ ನಡೆಸಿಕೊಟ್ಟರು.














