27.4 C
ಪುತ್ತೂರು, ಬೆಳ್ತಂಗಡಿ
July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಪ್ರಾ.ಕೃ.ಪ.ಸ.ಸಂಘದ ವತಿಯಿಂದ ಅಡಕೆ ತೋಟ ನಿರ್ವಹಣೆ ಬಗ್ಗೆ ಸಂವಾದ ಕಾರ್ಯಕ್ರಮ

ಮುಂಡಾಜೆ: ಉತ್ತಮ ಗುಣಮಟ್ಟದ ಅಡಕೆಯ ಉಪಯೋಗದಿಂದ ಆರೋಗ್ಯಕ್ಕೆ ಯಾವುದೇ ಹಾನಿ ಉಂಟಾಗದು. ಅಡಕೆ ಆರೋಗ್ಯಕ್ಕೆ ಉತ್ತಮವಾಗಿದ್ದು ಇದಕ್ಕೆ ರಾಸಾಯನಿಕಗಳನ್ನು ಬೆರೆಸಿದಾಗ ಅಪಾಯ ಉಂಟಾಗುವ ಸಾಧ್ಯತೆ ಇದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎಸ್. ಆರ್. ಸತೀಶ್ಚಂದ್ರ ಹೇಳಿದರು.

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನ ವಠಾರದಲ್ಲಿ ಜರುಗಿದ ಅಡಕೆ ತೋಟ ನಿರ್ವಹಣೆ ಬಗ್ಗೆ ಕೃಷಿಕ ಸದಸ್ಯರೊಂದಿಗೆ ಕ್ಯಾಂಪ್ಕೊ ಸಹಕಾರದಲ್ಲಿ ನಡೆದ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಜು.2ರಂದು ಮಾತನಾಡಿದರು.

ಕೃಷಿಕರು ಒಂದೇ ಬೆಳೆಯನ್ನು ನಂಬದೇ ಮಿಶ್ರ ಕೃಷಿಯಲ್ಲಿ ತೊಡಗಿಸಿಕೊಳ್ಳುವುದು ಉತ್ತಮ. ಅಡಕೆ ಬಗ್ಗೆ ಷಡ್ಯಂತ್ರ ನಡೆಯುತ್ತಿರುವುದು ಗಮನಕ್ಕೆ ಬರುತ್ತಿದ್ದು ಇದರ ಬಗ್ಗೆ ಕ್ಯಾಂಪ್ಕೊ, ಅಡಕೆ ಮಾರುಕಟ್ಟೆ ನಿರ್ವಹಿಸುತ್ತಿರುವ ಇತರ ಸಂಸ್ಥೆಗಳು ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿವೆ. ಕಾಲದ ಬದಲಾವಣೆ ಹಾಗೂ ಹವಾಮಾನ ವೈಪರೀತ್ಯದಿಂದ ಅಡಕೆಯ ಗುಣಮಟ್ಟ ಕುಸಿಯುತ್ತಿರುವುದು ಕಂಡುಬರುತ್ತಿದೆ. ಈ ಬಗ್ಗೆ ಕೃಷಿಕರು ಹೆಚ್ಚಿನ ಮುಂಜಾಗ್ರತೆ ವಹಿಸುವುದು ಅಗತ್ಯ ಎಂದರು.

ಕ್ಯಾಂಪ್ಕೊ ಕೃಷಿ ವಿಭಾಗದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಎನ್. ಆರ್. ಅಡಕೆ ತೋಟ ನಿರ್ವಹಣೆ ಕುರಿತು, ಡಿಜಿಎಂ ಗೋವಿಂದ ಭಟ್ ಅಡಕೆ ಮಾರುಕಟ್ಟೆ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಕೃಷಿಕ ಸದಸ್ಯರು ಸಂವಾದದಲ್ಲಿ ಭಾಗವಹಿಸಿದರು.
ಮುಂಡಾಜೆ ಪ್ಯಾಕ್ಸ್ ಕೆ. ಪ್ರಕಾಶ ನಾರಾಯಣ್, ಉಪಾಧ್ಯಕ್ಷ ರಾಘವ ಗೌಡ ಕೆ., ಸಿಇಒ ಪ್ರಸನ್ನ ಪರಾಂಜಪೆ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.

Related posts

ಫೆ.26: ಬೆಳಂಗಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬಂಟರ ಯಾನೆ ನಾಡವರ ಸಂಘ, ಕಣಿಯೂರು ಗ್ರಾಮ ಸಮಿತಿ ವತಿಯಿಂದ ಪದಗ್ರಹಣ, ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಕರಾಟೆ ಚಾಂಪಿಯನ್ಶಿಪ್: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಶಹೀರ್ ಅನಸ್ ಕುಮಿಟೆ ಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಬೆಳ್ಳಿ ಪದಕ

Suddi Udaya

ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಡಂತ್ಯರು ವಲಯದಲ್ಲಿ ನೂತನವಾಗಿ ಆಯ್ಕೆಯಾದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಗಾರ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ : ಯಶ್ವಿತ್ ಗೆ ಶೇ.90.40 ಅಂಕ

Suddi Udaya
error: Content is protected !!