25.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಖ್ಯೋಪಾಧ್ಯಾಯರಾಗಿ ಬಡ್ತಿ ಪಡೆದು ಪೆರ್ಲ ಬೈಪಾಡಿ ಶಾಲೆಗೆ ವರ್ಗಾವಣೆಗೊಂಡ ಬಜಿಲ ಸ. ಶಾಲೆಯ ಶಿಕ್ಷಕಿ ಜಯಶ್ರೀ ಕೆ ಇವರಿಗೆ ಪೋಷಕರಿಂದ ಬೀಳ್ಕೊಡುಗೆ, ಕಂಪ್ಯೂಟರ್ ಹಸ್ತಾಂತರ


ಕೊಯ್ಯೂರು: ಬಜಿಲ ಸರಕಾರಿ ಶಾಲೆಯಲ್ಲಿ 19 ವರ್ಷಗಳ ಕಾಲ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಕರ್ತವ್ಯ ನಿರ್ವಹಿಸಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರ್ಲ ಬೈಪಾಡಿ ಇಲ್ಲಿಗೆ ಮುಖ್ಯೋಪಾಧ್ಯಾಯರಾಗಿ ಬಡ್ತಿ ಪಡೆದು ವರ್ಗಾವಣೆಗೊಂಡ ಶ್ರೀಮತಿ ಜಯಶ್ರೀ ಕೆ ಇವರಿಗೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಪೋಷಕರ ಮತ್ತು ಊರವರ ಅಭಿಮಾನದ ಬೀಳ್ಕೊಡುಗೆ ಸಮಾರಂಭವು ನೆರವೇರಿತು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಹರೀಶ್ ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಕೊಯ್ಯೂರು ಇಲ್ಲಿನ ಪ್ರಾಂಶುಪಾಲರಾದ ಮೋಹನ್ ಗೌಡ, ಪೆರ್ಲ ಬೈಪಾಡಿ ಪ್ರೌಢ ಶಾಲೆಯ ನಿವೃತ್ತ ಸಹಶಿಕ್ಷಕರಾದ ವಿಜಯ ಕುಮಾರ್, ಹರ್ಷ ಗೆಳೆಯರ ಬಳಗ ಬಜಿಲ ಅಧ್ಯಕ್ಷ ರಾಮಣ್ಣ ಗೌಡ, ದಾಮೋದರ ಗೌಡ ಬೆರ್ಕೆ, ಕೂಸಪ್ಪ ಪೂಜಾರಿ, ಮೋಹನದಾಸ ಬಜಿಲ, ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ಜಗದೀಶ್ ಗೌಡ, ಶಾಲಾ ಹಿರಿಯ ವಿದ್ಯಾರ್ಥಿ ವಿವೇಕ್, ಹಿಂದೆ ಶಾಲೆಯಲ್ಲಿ ಸಹಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿದ್ದ ಶ್ರೀಮತಿ ರೀಮಾ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಶ್ರೀಮತಿ ಕುಸುಮಾವತಿ, ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ, ಸಹಶಿಕ್ಷಕರುಗಳಾದ ಶ್ರೀಮತಿ ಸೌಮ್ಯ, ಶ್ರೀಮತಿ ಕುಸುಮಾವತಿ, ಶ್ರೀಮತಿ ದೀಪಿಕಾ, ಅಡುಗೆ ಸಿಬ್ಬಂದಿ ಶ್ರೀಮತಿ ಸುಶೀಲಾ ಮತ್ತು ಶಾಲಾ ನಾಯಕಿ ಕುಮಾರಿ ಚಿರಶ್ರೀ ಹಾಗೂ ಶಾಲಾ ಪೋಷಕರು, ಊರವರು ಉಪಸ್ಥಿತರಿದ್ದರು.

ವರ್ಗಾವಣೆಗೊಂಡ ಶ್ರೀಮತಿ ಜಯಶ್ರೀ ಇವರು ಶಾಲೆಗೆ ಕಂಪ್ಯೂಟರ್ ನ್ನು ಕೊಡುಗೆಯಾಗಿ ನೀಡಿದರು.
ಶ್ರೀಮತಿ ಸೌಮ್ಯ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಸ್ವಾಗತಿಸಿ, ಕುಸುಮಾವತಿ ವಂದನಾರ್ಪಣೆ ಸಲ್ಲಿಸಿದರು. ಶಾಲಾ ಗೌರವ ಶಿಕ್ಷಕಿ ಶ್ರೀಮತಿ ದೀಪಿಕಾ ಅಭಿನಂದನಾ ಪತ್ರ ವಾಚಿಸಿದರು.

Related posts

ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ -ರೇಂಜರ್ಸ್ ಸಹಯೋಗದಲ್ಲಿ ಒಂದು ದಿನದ ಶಿಬಿರ

Suddi Udaya

ಮುಂಡಾಜೆ : ನಿಡಿಗಲ್ ನಿವಾಸಿ, ಗಣೇಶ ಪ್ರಭು ಹೃದಯಾಘಾತದಿಂದ ನಿಧನ

Suddi Udaya

ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಉಜಿರೆ ಜೆಸಿಐ ಸಿಟಿಗೆ ಹೊಸ ಘಟಕ ಔಟ್ ಸ್ಟ್ಯಾಂಡಿಂಗ್ ವಿನ್ನರ್ ಅವಾರ್ಡ್ ನೊಂದಿಗೆ ಹಲವು ಮನ್ನಣೆಗಳು

Suddi Udaya

ಚಾರ್ಮಾಡಿ: ಆಡಿಮಾರು ಇಂದಿರಾ ಮೋಹನ್ ಮನೆಗೆ ಬಿದ್ದ ಬೃಹತ್ ಮರ:ಶೌರ್ಯ ಘಟಕದ ಸ್ವಯಂ ಸೇವಕರಿಂದ ತೆರವುಗೊಳಿಸುವ ಕಾರ್ಯ

Suddi Udaya

ಕೃಷಿಕರ ವಿರೋಧಿ, ಪರಿಶಿಷ್ಟ ವರ್ಗ ಕಡೆಗಣಿಸಿದ ಬಜೆಟ್ – ಜಿಲ್ಲಾ ಕೆ ಡಿ ಪಿ ಸದಸ್ಯ ನ್ಯಾಯವಾದಿ ಸಂತೋಷ್ ಕುಮಾರ್

Suddi Udaya

ಚೆಸ್ ಪಂದ್ಯಾಟ: ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!