July 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ “POCSO ಕಾಯ್ದೆ ಜಾಗೃತಿ” ಕಾರ್ಯಕ್ರಮ

ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನ ಸಭಾಂಗಣದಲ್ಲಿ ಮಕ್ಕಳ ಲೈಂಗಿಕ ದೌರ್ಜನ್ಯದಿಂದ ರಕ್ಷಣೆ ಕಾಯ್ದೆ – POCSO Act, 2012 ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಭ್ಯಾಸ್ ಪಿ.ಯು ಕಾಲೇಜಿನ ಅಧ್ಯಕ್ಷ ಕಾರ್ತಿಕೇಯ ಎಂ.ಎಸ್ ಅವರು ವಹಿಸಿಕೊಂಡಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶ್ರೀಮತಿ. ಶ್ರದ್ಧಾ ಶೆಟ್ಟಿ ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.

ಮಂಗಳೂರಿನ ತತ್ವಸಿದ್ಧ ಸಂಸ್ಥೆಯ ಸ್ಥಾಪಕಿ ಹಾಗೂ ಹಿರಿಯ ವಕೀಲರಾದ ಶ್ರೀಮತಿ.ಶ್ರದ್ಧಾ ಶೆಟ್ಟಿ ಅವರು, POCSO ಕಾಯ್ದೆಯ ಮಹತ್ವವನ್ನು ವಿವರಿಸಿದರು. “18 ವರ್ಷದೊಳಗಿನ ಪ್ರತಿಯೊಬ್ಬ ಮಗು POCSO ಕಾಯ್ದೆಯ ವ್ಯಾಪ್ತಿಗೆ ಬರುತ್ತದೆ. ಮಗುವಿನ ಮೇಲೆ ನಡೆಯುವ ಯಾವುದೇ ರೀತಿಯ ಲೈಂಗಿಕ ದೌರ್ಜನ್ಯ, ಕಿರುಕುಳ ಅಥವಾ ಅಶ್ಲೀಲ ಚಿತ್ರಣವು ಗಂಭೀರ ಅಪರಾಧ. ಈ ಕಾಯ್ದೆಯಡಿ ಕಠಿಣ ಶಿಕ್ಷೆಗಳಿವೆ. ‘Good Touch, Bad Touch’ ಬಗ್ಗೆ ಅರಿವು ಮೂಡಿಸಿಕೊಂಡು, ಸುರಕ್ಷಿತವಾಗಿ ಮತ್ತು ಆತ್ಮವಿಶ್ವಾಸದಿಂದ ಇರಬೇಕು” ಎಂದು ವಿದ್ಯಾರ್ಥಿಗಳೊಂದಿಗೆ ಮುಕ್ತ ಸಂವಾದ ನಡೆಸಿದರು.

ಕಾರ್ಯಕ್ರಮದ ಅಧ್ಯಕ್ಷ ಕಾರ್ತಿಕೇಯ ಎಂ.ಎಸ್ ಅವರು ಮಾತನಾಡಿ, “ಮಕ್ಕಳ ಸುರಕ್ಷತೆ ಎಂಬುದು ಶಾಲೆ, ಮನೆ ಮತ್ತು ಸಮಾಜದ ಜಂಟಿ ಜವಾಬ್ದಾರಿ. ನಿಮ್ಮ ದೇಹ, ನಿಮ್ಮ ಮಿತಿ ಬಗ್ಗೆ ಅರಿವು ಇರಬೇಕು. ಯಾವುದೇ ರೀತಿಯ ಅನುಮಾನ ಅಥವಾ ಭಯವಿದ್ದರೆ ಶಿಕ್ಷಕರು, ಪೋಷಕರು ಅಥವಾ ಪೊಲೀಸರ ಬಳಿ ನಿರ್ಭಯವಾಗಿ ಹೇಳಬೇಕು. ಮೌನವಾಗಿರುವುದೇ ದೊಡ್ಡ ಅಪಾಯ” ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಅಭ್ಯಾಸ್ ಸಂಸ್ಥೆಯ ಕಾರ್ಯದರ್ಶಿ ಶಿಲ್ಪಾ ಆರ್ ಮತ್ತು ಆಡಳಿತ ಅಧಿಕಾರಿ ಪ್ರಮೋದ್ ಗೌಡ ಹಾಗೂ ಪ್ರಾಂಶುಪಾಲರಾದ ದೀಪಕ್ ಕೆ. ಎಸ್ , ಪಿ. ಆರ್. ಓ ರಾದ ಧನಂಜಯ ಹಾಗೂ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು, ಸಹಾಯಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕ ಸುಧೀರ್ ನಿರೂಪಿಸಿದರು. ಹಿಂದಿ ವಿಭಾಗದ ಉಪನ್ಯಾಸಕಿ ಜೋಸೆಫಿನ್ ಸ್ವಾಗತಿಸಿದರು. ವಿದ್ಯಾರ್ಥಿನಿ ಸ್ವಸ್ತಿ ಶ್ರೀ ಹೆಬ್ಬಾರ್ ಪ್ರಾರ್ಥನೆಗೈದರು. ಜೀವಶಾಸ್ತ್ರ ವಿಭಾಗದ ಉಪನ್ಯಾಸಕ ಚೆನ್ನಬಸವ ವಂದನಾರ್ಪಣೆ ಮಾಡಿದರು.

Related posts

ಶ್ರೀ ರಾಮ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಡಿ.17: ಕರಾಯ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮನೆಯಿಂದ ಪೇಟೆಗೆ ಹೋಗುತ್ತೇನೆಂದು ‌ಹೇಳಿ ಹೋದ‌ ತೋಟತ್ತಾಡಿಯ ವ್ಯಕ್ತಿಯ ಶವ ಉಜಿರೆ ರಸ್ತೆ ಬದಿಯಲ್ಲಿ ಪತ್ತೆ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಉಜಿರೆ ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಮಳೆನೀರಿನ ಕೊಯ್ಲು ಪ್ರಾತ್ಯಾಕ್ಷಿತೆ

Suddi Udaya

ಶಿಬಾಜೆ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಪಿಕಪ್ ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!