July 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಉಜಿರೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ ಭಾಸ್ಕರ ಆಚಾರ್ಯ ವಿಧಿವಶ

ಉಜಿರೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ ಭಾಸ್ಕರ ಆಚಾರ್ಯ( 80ವರ್ಷ) ಉಜಿರೆ ಅವರು ಅಲ್ಪಕಾಲದ ಅಸೌಖ್ಯದಿಂದ ಜು.6 ರಂದು ಬೆಳಿಗ್ಗೆ ನಿಧನರಾದರು.

ವೃತ್ತಿಯಲ್ಲಿ ವಾಹನ ಮತ್ತು ಪಂಪ್ ಸೆಟ್ ಮೆಕ್ಯಾನಿಕ್ ಆಗಿ ಸ್ಥಳೀಯವಾಗಿ ಹೆಸರುವಾಸಿಯಾಗಿದ್ದ ಇವರು ಅಯೋಧ್ಯಾ ಶ್ರೀ ರಾಮ ಮಂದಿರ ಹೋರಾಟದ ಸಂದರ್ಭದಲ್ಲಿ ಕರ್ನಾಟಕದಿಂದ ಹೋದ ರಾಮಶಿಲಾಪೂಜನ ರಥದೊಂದಿಗೆ ಅಯೋಧ್ಯೆ ತಲುಪಿದ್ದ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕರಾಗಿದ್ದರು. ಸಂಘದ ಶಾಖೆಯಲ್ಲಿ ಸುಶ್ರಾವ್ಯವಾಗಿ ಹಾಡು ಹೇಳಿ ಕೊಡುತ್ತಿದ್ದ, ಪಥ ಸಂಚಲನದಲ್ಲಿ ಶಂಖವಾದಕರಾಗಿ ಭಾಗವಹಿಸುತ್ತಿದ್ದ, ರಾಷ್ಟ್ರವಾದಿಯಾಗಿ, ತನ್ನ ಜೀವಿತಾವಧಿ ಪೂರ್ತಿ ಸಕ್ರಿಯವಾಗಿ ಸಮಾಜ ಸೇವೆಯಲ್ಲಿ ಪಾಲ್ಗೊಂಡಿದ್ದರು.

ಮೃತರು ಪತ್ನಿ ಶಾರದಾ, ಓರ್ವೆ ಪುತ್ರಿ, ಈರ್ವರೂ ಪುತ್ರರಾದ ಲವ ಕುಮಾರ್ ಮತ್ತು ಕುಶ ಕುಮಾರ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಜ.9: ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ವಿದ್ವಾಂಸರಿಂದ ವಿಚಾರಗೋಷ್ಠಿ

Suddi Udaya

ಸುದ್ದಿ ಉದಯ ವಾರ ಪತ್ರಿಕೆ ದೀಪಾವಳಿ ವಿಶೇಷಾಂಕ ಹಾಗೂ ‘ಹೇ ಶಾರದೆ’ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಅಂಡಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡ “ಕ್ಷೀರ ಸಮೃದ್ಧಿ” ಲೋಕಾರ್ಪಣೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ “ಪರ್ಯೂಷಣ ಪರ್ವ” ಕೃತಿ ಬಿಡುಗಡೆ

Suddi Udaya

ಬಂದಾರು, ಮೊಗ್ರು ಶಕ್ತಿ ಕೇಂದ್ರದ ಭಾಜಪ ಕಾರ್ಯಕರ್ತರ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya
error: Content is protected !!