ಉಜಿರೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ ಭಾಸ್ಕರ ಆಚಾರ್ಯ( 80ವರ್ಷ) ಉಜಿರೆ ಅವರು ಅಲ್ಪಕಾಲದ ಅಸೌಖ್ಯದಿಂದ ಜು.6 ರಂದು ಬೆಳಿಗ್ಗೆ ನಿಧನರಾದರು.
ವೃತ್ತಿಯಲ್ಲಿ ವಾಹನ ಮತ್ತು ಪಂಪ್ ಸೆಟ್ ಮೆಕ್ಯಾನಿಕ್ ಆಗಿ ಸ್ಥಳೀಯವಾಗಿ ಹೆಸರುವಾಸಿಯಾಗಿದ್ದ ಇವರು ಅಯೋಧ್ಯಾ ಶ್ರೀ ರಾಮ ಮಂದಿರ ಹೋರಾಟದ ಸಂದರ್ಭದಲ್ಲಿ ಕರ್ನಾಟಕದಿಂದ ಹೋದ ರಾಮಶಿಲಾಪೂಜನ ರಥದೊಂದಿಗೆ ಅಯೋಧ್ಯೆ ತಲುಪಿದ್ದ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕರಾಗಿದ್ದರು. ಸಂಘದ ಶಾಖೆಯಲ್ಲಿ ಸುಶ್ರಾವ್ಯವಾಗಿ ಹಾಡು ಹೇಳಿ ಕೊಡುತ್ತಿದ್ದ, ಪಥ ಸಂಚಲನದಲ್ಲಿ ಶಂಖವಾದಕರಾಗಿ ಭಾಗವಹಿಸುತ್ತಿದ್ದ, ರಾಷ್ಟ್ರವಾದಿಯಾಗಿ, ತನ್ನ ಜೀವಿತಾವಧಿ ಪೂರ್ತಿ ಸಕ್ರಿಯವಾಗಿ ಸಮಾಜ ಸೇವೆಯಲ್ಲಿ ಪಾಲ್ಗೊಂಡಿದ್ದರು.
ಮೃತರು ಪತ್ನಿ ಶಾರದಾ, ಓರ್ವೆ ಪುತ್ರಿ, ಈರ್ವರೂ ಪುತ್ರರಾದ ಲವ ಕುಮಾರ್ ಮತ್ತು ಕುಶ ಕುಮಾರ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.














