22.9 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಉಜಿರೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ ಭಾಸ್ಕರ ಆಚಾರ್ಯ ವಿಧಿವಶ

ಉಜಿರೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ ಭಾಸ್ಕರ ಆಚಾರ್ಯ( 80ವರ್ಷ) ಉಜಿರೆ ಅವರು ಅಲ್ಪಕಾಲದ ಅಸೌಖ್ಯದಿಂದ ಜು.6 ರಂದು ಬೆಳಿಗ್ಗೆ ನಿಧನರಾದರು.

ವೃತ್ತಿಯಲ್ಲಿ ವಾಹನ ಮತ್ತು ಪಂಪ್ ಸೆಟ್ ಮೆಕ್ಯಾನಿಕ್ ಆಗಿ ಸ್ಥಳೀಯವಾಗಿ ಹೆಸರುವಾಸಿಯಾಗಿದ್ದ ಇವರು ಅಯೋಧ್ಯಾ ಶ್ರೀ ರಾಮ ಮಂದಿರ ಹೋರಾಟದ ಸಂದರ್ಭದಲ್ಲಿ ಕರ್ನಾಟಕದಿಂದ ಹೋದ ರಾಮಶಿಲಾಪೂಜನ ರಥದೊಂದಿಗೆ ಅಯೋಧ್ಯೆ ತಲುಪಿದ್ದ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕರಾಗಿದ್ದರು. ಸಂಘದ ಶಾಖೆಯಲ್ಲಿ ಸುಶ್ರಾವ್ಯವಾಗಿ ಹಾಡು ಹೇಳಿ ಕೊಡುತ್ತಿದ್ದ, ಪಥ ಸಂಚಲನದಲ್ಲಿ ಶಂಖವಾದಕರಾಗಿ ಭಾಗವಹಿಸುತ್ತಿದ್ದ, ರಾಷ್ಟ್ರವಾದಿಯಾಗಿ, ತನ್ನ ಜೀವಿತಾವಧಿ ಪೂರ್ತಿ ಸಕ್ರಿಯವಾಗಿ ಸಮಾಜ ಸೇವೆಯಲ್ಲಿ ಪಾಲ್ಗೊಂಡಿದ್ದರು.

ಮೃತರು ಪತ್ನಿ ಶಾರದಾ, ಓರ್ವೆ ಪುತ್ರಿ, ಈರ್ವರೂ ಪುತ್ರರಾದ ಲವ ಕುಮಾರ್ ಮತ್ತು ಕುಶ ಕುಮಾರ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ : ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಗಿ ಕಿಶೋರ್ ಪಿ ನೇಮಕ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಪಾಯಿಂಟ್ ನಲ್ಲಿ ಕಾರ್ಯಾಚರಣೆ ಆರಂಭ

Suddi Udaya

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

Suddi Udaya

ಗರ್ಡಾಡಿ ನಿವಾಸಿ ಲೀಲಾ ಹೃದಯಾಘಾತದಿಂದ ನಿಧನ

Suddi Udaya

ಸೌಜನ್ಯರವರ ಅತ್ಯಾಚಾರ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಎಸ್.ಡಿ.ಎಂ ಮಸ್ಟರಿಂಗ್ ಕೇಂದ್ರದಿಂದ ತಾಲೂಕಿನ 241 ಮತಗಟ್ಟೆಗಳಿಗೆ ಮತಯಂತ್ರಯೊಂದಿಗೆ ತೆರಳಿದ ಚುನಾವಣಾ ಸಿಬ್ಬಂದಿಗಳು

Suddi Udaya
error: Content is protected !!