23.6 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಪುಚಿನ್ ಕೃಷಿಕಾ ಸೇವಾ ಕೇಂದ್ರ ಮತ್ತು ವಿಮುಕ್ತಿ ಸ್ವ ಸಹಾಯ ಸಂಘಗಳ ವತಿಯಿಂದ ವಿದ್ಯಾಸ್ನೇಹಿ ಬಡ್ಡಿರಹಿತ ಶಿಕ್ಷಣ ಸಾಲ ವಿತರಣೆ

ಲಾಯಿಲ: ಕಪುಚಿನ್ ಕೃಷಿಕಾ ಸೇವಾ ಕೇಂದ್ರ ಮತ್ತು ವಿಮುಕ್ತಿ ಸ್ವ ಸಹಾಯ ಸಂಘಗಳ ವತಿಯಿಂದ 7ನೇ ವರ್ಷದ ವಿದ್ಯಾಸ್ನೇಹಿ ಬಡ್ಡಿರಹಿತ ಶಿಕ್ಷಣ ಸಾಲ ವಿತರಣಾ ಕಾರ್ಯಕ್ರಮವು ಜು.5 ರಂದು ವಿಮುಕ್ತಿ ಸಭಾಭವನದಲ್ಲಿ ನಡೆಯಿತು.

ಸಂಸ್ಥೆಯ ನಿರ್ದೇಶಕರಾದ ಫಾ.ವಿನೋದ್ ಮಸ್ಕರೇನಸ್‌ರವರು ಸಂವಿಧಾನದ ಪುಸ್ತಕಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಳೆದ 7 ವರ್ಷಗಳ ವಿದ್ಯಾಸ್ನೇಹಿಯ ಪಯಣದ ಹಾದಿಯನ್ನು ಸಹ ನಿರ್ದೇಶಕರಾದ ಫಾ ರೋಹನ್ ಲೋಬೋರವರು ವಿವರಿಸಿದರು. ಸಂಸ್ಥೆಯ ನಿರ್ದೇಶಕರು ವಿದ್ಯಾರ್ಥಿಗಳಿಗೆ ಸಮುದಾಯದ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮುದಾಯದಲ್ಲಿರುವ ಅಸಹಾಯಕ ಹಾಗೂ ಬಡ ಜನರಿಗೆ ಸಹಾಯ ಮಾಡುವ ಮನೋಭಾವವನ್ನು ಬೆಳೆಸಿಕೊಳ್ಳಬೇಕೆಂದು ತಿಳಿಸುತ್ತಾ ಅವರ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು.

ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಶಾಲಿ ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ತಮ್ಮ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳುವಂತೆ ಪ್ರೇರೇಪಿಸಿದರು ಹಾಗೂ ಉಪಾಧ್ಯಕ್ಷೆ ಶಶಿಕಲಾ ಸಂಸ್ಥೆಯ ಕಾರ್ಯ ವೈಖರಿಯನ್ನು ಶ್ಲಾಘಿಸಿದರು. ಒಟ್ಟು 31 ವಿದ್ಯಾರ್ಥಿಗಳಿಗೆ ಸುಮಾರು 8,91,000 ರೂಪಾಯಿಗಳ ಶೈಕ್ಷಣಿಕ ಬಡ್ಡಿರಹಿತ ಸಾಲದ ಮೊತ್ತವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಸಹ ನಿರ್ದೇಶಕರಾದ ಫಾ ರೋಹನ್ ಲೋಬೋ, ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಂಸ್ಥೆಯ ಕಾರ್ಯಕರ್ತೆ ಶ್ರೀಮತಿ ಮೋಹಿನಿಯವರು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ರಾಜ್ಯದ ಅಡಿಕೆ ಲಾರಿಗಳು ಮಹಾರಾಷ್ಟ್ರದಲ್ಲಿ ಜಪ್ತಿ,ಕರಾವಳಿಯಲ್ಲಿ ಅಡಿಕೆ ಧಾರಣೆ ಕುಸಿತದ ಆತಂಕ

Suddi Udaya

ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮಂಗಳೂರು ಜಿಲ್ಲಾ ಸಮಿತಿಯ ಸಭೆ

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸುಗಮ ಸಂಚಾರಕ್ಕಾಗಿ ಆರಂಭಗೊಂಡ “ಪಲ್ಲಕ್ಕಿ” ನೂತನ ಬಸ್ ಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya
error: Content is protected !!