July 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಣ್ಣೀರುಪಂತ: ಪಾಲೇದುವಿನ ಡಾ. ಸ್ವಾತಿಕ್‌ರಿಗೆ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ಪದವಿ

ಬೆಳ್ತಂಗಡಿ: ಕೂಲಿ ಕಾರ್ಮಿಕೆಯ ಪುತ್ರ ಡಾ. ಸ್ವಾತಿಕ್ ಪಿ.ಟಿ. ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ಫಿಸಿಯೋಥೆರಪಿಯಲ್ಲಿ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ಪದವಿ ಪಡೆದು ಸಾಧನೆಗೈದಿದ್ದಾರೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ಪಾಲೇದು ಸಮೀಪದ ಕೊಲ್ಯೆತ್ಯಾರು ನಿವಾಸಿ ಉಷಾ-ಪುರುಷೋತ್ತಮ ಪೂಜಾರಿ ದಂಪತಿಗಳ ಕಿರಿಯ ಪುತ್ರ ಡಾ.ಸಾತ್ವಿಕ್ ಪಿ.ಟಿ.

ಬಡಕುಟುಂಬದವಾರಗಿದ್ದು ಆರ್ಥಿಕ ಸಂಕಷ್ಟದ ನಡುವೆಯೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಘಟಿಕೋತ್ಸವದಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಸ್ಪೂರ್ತಿಯಾಗಿದ್ದಾರೆ. ಅದರಲ್ಲೂ ನ್ಯೂರೋ ಫಿಸಿಯೋಥೆರಪಿ ವಿಷಯದಲ್ಲಿ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಶಾಲೆ ಪಾಲೇದುವಿನಲ್ಲಿ, ಪ್ರೌಢ ಶಿಕ್ಷಣವನ್ನು ಮೊರಾರ್ಜಿ ದೇಸಾಯಿ ಮಚ್ಚಿನ, ಪುಂಜಾಲಕಟ್ಟೆ ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ನಡೆಸಿ ಹಾಗೂ ಉನ್ನತ ಶಿಕ್ಷಣವನ್ನು ಲಕ್ಷ್ಮೀ ಕಾಲೇಜಿನಲ್ಲಿ ಪೂರೈಸಿದ್ದಾರೆ.

ತಾಯಿ-ತಂದೆ ಕೂಲಿ ಕಾರ್ಮಿಕರಾಗಿದ್ದು ಮಗನ ಭವಿಷ್ಯಕ್ಕೆ ತಾಯಿ ಉಷಾ ಆಸರೆಯಾಗಿ ನಿಂತು, ಮನೆಯ ಆರ್ಥಿಕ ಸಂಕಷ್ಟದ ನಡುವೆ ತಾನು ಕಲಿಯದಿದ್ದರೂ ತನ್ನ ಮಗ ವಿದ್ಯಾರ್ಜನೆಯಿಂದ ವಂಚಿತರಾಗಬಾರದು ಎಂದು ತನ್ನ ದುಡಿಮೆ ಮೂಲಕ ಮಗನ ಶಿಕ್ಷಣಕ್ಕೆ ಉತ್ತೇಜನ ನೀಡಿ ತಾಯಿಗೆ ಮಗನ ಸಾಧನೆ ಕಂಡು ಹರ್ಷ ವ್ಯಕ್ತಪಡಿಸಿದ್ದಾರೆ.

ಶಿಕ್ಷಣದ ನಡುವೆ ಬಿಡುವಿನ ಸಮಯ ಇತರ ಕೆಲಸಕ್ಕೆ ಹೋಗಿ, ಸಾಧನೆಯ ಛಲ ಮತ್ತು ಸರ್ಕಾರಿ ಹಾಗೂ ಖಾಸಗಿ ವಿದ್ಯಾರ್ಥಿವೇತನಗಳ ಹಾಗೂ ಆಪ್ತರ ನೆರವಿನಿಂದ ಹಾಗೂ ನನ್ನ ತಾಯಿಯ ದೊಡ್ಡ ಕೊಡುಗೆಯಿಂದ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ಪದವಿ ಗಳಿಸಲು ಸಹಕಾರಿಯಾಗಿದೆ, ಮುಂದೆ ಒಂದು ವರ್ಷ ಕೆಲಸ ಮಾಡಿ ಬಳಿಕ ಆರ್ಥೋಪೆಡಿಕ್ ಪಿಸಿಯೋಥೆರಪಿಯಲ್ಲಿ ಸಾತ್ನಕೊತ್ತರ ಪದವಿ ಪಡೆಬೇಕೆಂಬ ಆಕ್ಷಾಂಕ್ಷೆ ಇದೆ ಎನ್ನುತ್ತಾರೆ ಡಾ.ಸಾತ್ವಿಕ್ ಪಿ.ಟಿ.

Related posts

ಧರ್ಮಸ್ಥಳ: ಅಕ್ರಮ ಕೂಟ ಸೇರಿ ಗಲಾಟೆ ಪ್ರಕರಣ6 ಜನರ ಬಂಧನ: ಜಮೀನು ಮಂಜೂರು

Suddi Udaya

ಮಾಜಿ ಶಾಸಕ ವಸಂತ ಬಂಗೇರ ಅಗಲುವಿಕೆಗೆ ಕಾಜೂರು ಸಮಿತಿಯಿಂದ ಸಂತಾಪ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಥಮ್ ಮತ್ತು ಶಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಮಟ್ಟದ ಜನಸ್ಪಂದನ ಸಭೆ

Suddi Udaya

ಬೆಳ್ತಂಗಡಿ: ಸವಣಾಲುವಿನಲ್ಲಿ ಬೋನಿಗೆ ಬಿದ್ದ ಚಿರತೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಮಂಡಲದ ಸದಸ್ಯರಿಂದ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿ

Suddi Udaya
error: Content is protected !!