22.9 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರತಿ ಮಂಗಳವಾರ ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ‘ಗಣಹವನ’ ಸೇವೆ ಆರಂಭ

ಬೆಳ್ತಂಗಡಿ:ಅಳದಂಗಡಿಯ ಪವಿತ್ರವಾದ ಕಾರಣೀಕ ಕ್ಷೇತ್ರವಾದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಕಲ ವಿಘ್ನಗಳ ನಿವಾರಕ ಹಾಗೂ ಇಷ್ಟಾರ್ಥ ಪ್ರದಾತನಾದ ಶ್ರೀ ಮಹಾಗಣಪತಿಯ ದಿವ್ಯ ಸಾನ್ನಿಧ್ಯದಲ್ಲಿ ಪ್ರತಿ ಮಂಗಳವಾರ ವಿಶೇಷ ‘ಗಣಹವನ’ ಸೇವೆಯನ್ನು ಆಯೋಜಿಸಲಾಗಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಶಶಿಧರ ಡೋಂಗ್ರೆ ತಿಳಿಸಿದ್ದಾರೆ.

ಈ ವಿಶೇಷ ಸೇವೆಯ ಮೊದಲ ಕಾರ್ಯಕ್ರಮವು ಜುಲೈ 7, 2026 ಮಂಗಳವಾರ ನಡೆಯಲಿದ್ದು, ಬೆಳಿಗ್ಗೆ ಪ್ರಾರಂಭವಾಗಿ 10 ಗಂಟೆಗೆ ಗಣಹವನದ ಪೂರ್ಣಾಹುತಿ ನೆರವೇರಲಿದೆ. ಪ್ರಥಮ ಗಣಹವನ ಸೇವೆಯನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ. ಶಶಿಧರ ಡೋಂಗ್ರೆ ಹಾಗೂ ಡಾ. ಸುಷ್ಮಾ ಡೋಂಗ್ರೆ ದಂಪತಿ ನೆರವೇರಿಸಲಿದ್ದಾರೆ.

ಗಣಹವನ ಸೇವೆಯಲ್ಲಿ ಭಾಗವಹಿಸುವುದರಿಂದ ಭಕ್ತರು ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತ ಬಂಧುಗಳು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮನವಿ ಮಾಡಿದೆ.

ಗಣಹವನ ಸೇವಾ ದರ: ರೂ. 3,000/- ಮಾತ್ರ. ಸೇವಾರ್ಥಿಗಳು ಹೂ, ಹಣ್ಣು ತರಬೇಕು. ಹವನಕ್ಕೆ ಬೇಕಾದ ಉಳಿದ ಎಲ್ಲ ಸಾಮಾಗ್ರಿಗಳು, ಪುರೋಹಿತರ ವ್ಯವಸ್ಥೆಯನ್ನು ದೇವಸ್ಥಾನದ ವತಿಯಿಂದಲೇ ಮಾಡಲಾಗುವುದು. ಆಸಕ್ತ ಭಕ್ತರು ತಮ್ಮ ಹೆಸರನ್ನು ಕನಿಷ್ಠ ಒಂದು ವಾರ ಮುಂಚಿತವಾಗಿ ದೇವಸ್ಥಾನದ ಕಛೇರಿಯಲ್ಲಿ ನೋಂದಾಯಿಸಿಕೊಂಡು ಸಹಕರಿಸಬೇಕಾಗಿ ಕೋರಿಕೆ.
ಹೆಚ್ಚಿನ ಮಾಹಿತಿಗಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾl ಶಶಿಧರ ಡೋಂಗ್ರೆ- 9448548668 ಹಾಗೂ ಅರ್ಚಕರಾದ ಪ್ರವೀಣ ಮಯ್ಯ – 7483988272 ಇವರನ್ನು ಸಂಪರ್ಕಿಸಬಹುದಾಗಿದೆ.

Related posts

ಬೆಳ್ತಂಗಡಿ: ಗಾಳಿ ಮಳೆಗೆ 44 ವಿದ್ಯುತ್ ಕಂಬ ಧರಾಶಾಯಿ: ಅಪಾರ ಹಾನಿ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಚಾರ್ಮಾಡಿ: ಅಂಗನವಾಡಿ ಸಹಾಯಕಿ ಆತ್ಮಹತ್ಯೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

Suddi Udaya

ನಿಡ್ಲೆ: ಸರಕಾರಿ ಬಸ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya

ಗುರುವಾಯನಕೆರೆ ಎಕ್ಸೆಲ್ ಕೋಚಿಂಗ್ ಅಕಾಡೆಮಿಯಲ್ಲಿ ವಾರಾಂತ್ಯದ ತರಗತಿ

Suddi Udaya
error: Content is protected !!