22.9 C
ಪುತ್ತೂರು, ಬೆಳ್ತಂಗಡಿ
August 22, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು: ಸಹೋದರರಿಬ್ಬರಿದ್ದ ಬೈಕ್ ಗೆ ಗೂಡ್ಸ್ ರಿಕ್ಷಾ ಡಿಕ್ಕಿ: ಓರ್ವ ಸ್ಥಳದಲ್ಲೇ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

ವೇಣೂರು: ದ್ವಿಚಕ್ರ ವಾಹನಕ್ಕೆ ಗೂಡ್ಸ್ ರಿಕ್ಷಾ ಡಿಕ್ಕಿಯೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ವೇಣೂರು ಪೊಲೀಸ್‌ ಠಾಣಾ ವ್ಯಾಪ್ತಿಯ ರಾಜ್ಯ ಹೆದ್ದಾರಿ ನಿಟ್ಟಡೆ ಬಳಿ ಜು. 5ರ ರಾತ್ರಿ ನಡೆದಿದೆ.

ವೇಣೂರು ಗ್ರಾ.ಪಂ. ವ್ಯಾಪ್ತಿಯ ಕರಿಮಣೇಲು ಗ್ರಾಮದ ಗಾಂಧಿನಗರ ತಿಮರಡ್ಡ ಮನೆ ನಿವಾಸಿ ರವೀಂದ್ರ ಮೂಲ್ಯ (47ವ) ಈ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಮತ್ತೋರ್ವ ಸಹೋದರ ಜಗದೀಶ್ ಮೂಲ್ಯ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಹಿನ್ನೆಲೆ:
ಗಾರೆ ಕೆಲಸ ಮಾಡಿಕೊಂಡಿದ್ದ ಸಹೋದರರು ಕೆಲಸ ಮುಗಿಸಿ ದ್ವಿಚಕ್ರ ವಾಹನದಲ್ಲಿ ಗುರುವಾಯನಕೆರೆಯಿಂದ ವೇಣೂರು ಕಡೆಗೆ ಬರುತ್ತಿದ್ದ ವೇಳೆ ವೇಣೂರಿನಿಂದ ಹೋಗುತ್ತಿದ್ದ ಗೂಡ್ಸ್ ರಿಕ್ಷಾ ನಿಟ್ಟಡೆಯ ಕುಂಭಶ್ರೀ ಶಾಲಾ ಬಳಿ ಮುಖಾಮುಖಿ ಡಿಕ್ಕಿಯೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಪಲ್ಟಿಯಾಗಿದ್ದು, ರವೀಂದ್ರ ಮೂಲ್ಯ ಅವರ ತಲೆಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದರೆ. ಜಗದೀಶ್ ಮೂಲ್ಯ ಅವರಿಗೆ ಕಾಲುಗಳಿಗೆ ಬಲವಾದ ಗಾಯಗಳಾಗಿವೆ. ರಿಕ್ಷಾ ಚಾಲಕ ಹಾಗೂ ಸ್ಥಳೀಯರು ಸೇರಿ ಗಾಯಾಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾಗಿದ್ದಾರೆ.

ವೇಣೂರಿನಲ್ಲಿ ತರಕಾರಿ ಅಂಗಡಿ ನಡೆಸುತ್ತಿರುವ ಪುತ್ತುಮೋನು ಎಂಬವರ ಗೂಡ್ಸ್ ರಿಕ್ಷಾ ಆಗಿದ್ದು, ರಾತ್ರಿ ಅಂಗಡಿಯಿಂದ ಕೆಲಸ ಮುಗಿಸಿ ಮನೆಗೆ ಕಡೆಗೆ ತೆರಳುತ್ತಿದ್ದು, ನಿಟ್ಟಡೆಯಲ್ಲಿ ಹೆದ್ದಾರಿಯಲ್ಲಿದ್ದ ಸಣ್ಣ ಗುಂಡಿಯೊಂದನ್ನು ತಪ್ಪಿಸುವ
ಈ ದುಘ೯ಟನೆ ನಡೆದಿದೆ ಎನ್ನಲಾಗಿದೆ.
ಮೃತ ರವೀಂದ್ರ ಅವರು ತಾಯಿ ಬಾಗಿ, ಪತ್ನಿ ಭವಾನಿ, ಪುತ್ರ ಸ್ವಸ್ತಿಕ್, ಸಹೋದರರು, ಸಹೋದರಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಪಶು ಆಸ್ಪತ್ರೆಯಲ್ಲಿ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆ – ಮಾಹಿತಿ ಶಿಬಿರ

Suddi Udaya

ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ವಿನೂತನ ಕಾರ್ಯಕ್ರಮ ತುಡಿತ ಭಾಗ 4

Suddi Udaya

ಮುಂಡೂರು : ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ: ಶಿಲಾಮಯ ಕಟ್ಟೆ ಹಾಗೂ ಗುಡಿ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡಿದ ಗುರುವಪ್ಪ ಸಾಲಿಯಾನ್ ಕೇರಿಯಾರ್ ರವರಿಗೆ ಸನ್ಮಾನ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿದ ಸಾರ್ವಜನಿಕರು: ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಬಳಂಜ ಗ್ರಾ‌.ಪಂ ಹಾಗೂ ಅರಣ್ಯ ಇಲಾಖೆಗೆ ಮನವಿ

Suddi Udaya

ಮಿತ್ತಬಾಗಿಲುನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಬೆಳ್ತಂಗಡಿ ಕ್ಷೇತ್ರದ 81 ಗ್ರಾಮಗಳಿಗೆ ಭೇಟಿ

Suddi Udaya
error: Content is protected !!