July 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ.

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆಯನ್ನು ಜು. 4 ರಂದು ಶಾಲಾ ಸಭಾಂಗಣದಲ್ಲಿ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭಿಸಲಾಯಿತು.

ವಿದ್ಯಾರ್ಥಿನಿಯಾದ ಮನ್ವಿತಾ ನಾಯಕ್ ವನಮಹೋತ್ಸವದ ಮಹತ್ವದ ಬಗ್ಗೆ ವಿವರಣೆ ನೀಡಿದರು. ವಿದ್ಯಾರ್ಥಿಗಳು ಹಾಡು, ನೃತ್ಯ, ನಾಟಕದ ಮೂಲಕ ವನಮಹೋತ್ಸವದ ಮಹತ್ವವನ್ನು ಪ್ರದರ್ಶಿಸಿದರು.

ಮುಖ್ಯ ಅತಿಥಿಗಳಾಗಿ ಜಯಪ್ರಸಾದ್ ಡಿ.ಕೆ ಕಡಮ್ಮಾಜೆ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ಒಂದು ತೋಟವನ್ನು ಬೆಳೆಸಲು ಹೆಚ್ಚಿನ ಕಾಳಜಿ ಮತ್ತು ಪ್ರೀತಿಯ ಅಗತ್ಯವಿದೆ. ವನಮಹೋತ್ಸವದ ಬಗ್ಗೆ ಪ್ರತಿಯೊಬ್ಬರಲ್ಲೂ ಭಾವನಾತ್ಮಕ ಬಾಂಧವ್ಯ ಇರಬೇಕು ಎಂದು ಹೇಳಿ, ಮಕ್ಕಳಿಗೆ ವನಮಹೋತ್ಸವದ ಶುಭಾಶಯವನ್ನು ಕೋರಿದರು.

ಕಾರ್ಯಕ್ರಮಕ್ಕೆ ಸೇಕ್ರೆಡ್ ಹಾರ್ಟ್ ಚರ್ಚ್ ಮಡಂತ್ಯಾರಿನ ಸಹಾಯಕ ಧರ್ಮ ಗುರುಗಳಾದ ವಂ|ಸ್ವಾ| ಲ್ಯಾರಿ ಪಿಂಟೋ ರವರು ಆಗಮಿಸಿ, ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ನಾವು ಬೆಳೆಯುತ್ತಿದ್ದಂತೆ ನಮ್ಮ ಪ್ರಕೃತಿಯನ್ನು ಎಂದಿಗೂ ಮರೆಯಬಾರದು ಎಂದು ಹೇಳಿದರು. ಒಂದು ಮರವನ್ನು ನೆಟ್ಟರೆ ಅದು ನಮಗೆ ಅಮೂಲ್ಯವಾದ ಆಮ್ಲಜನಕವನ್ನು ನೀಡುತ್ತದೆ. ಎಂದು ಹೇಳಿ ಮಕ್ಕಳಿಗೆ ವನಮಹೋತ್ಸವದ ಶುಭಾಶಯವನ್ನು ಕೋರಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೊ ಡೇಸ , ಮಡಂತ್ಯಾರು ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷ ನೆಲ್ಸನ್ ಲಸ್ರಾದೋ , ಶಿಕ್ಷಕ- ರಕ್ಷಕ ಸಂಘದ ಉಪಾಧ್ಯಕ್ಷ ರವಿಂದ್ರ ರೈ ಉಪಸ್ಥಿತರಿದ್ದರು.ವಿದ್ಯಾರ್ಥಿಗಳಾದ ಸುಹಾ ಫಾತಿಮಾ ರವರು ಕಾರ್ಯಕ್ರಮವನ್ನು ನಿರೂಪಿಸಿ, ರಿತಿಕಾ ಶೆಣೈ ಸ್ವಾಗತಿಸಿ, ಆದ್ಯ ಜೆ ಧನ್ಯವಾದವನ್ನು ಸಮರ್ಪಿಸಿದರು.ಕಾರ್ಯಕ್ರಮಕ್ಕೆ ಶಾಲಾ ಶಿಕ್ಷಕ- ಶಿಕ್ಷಕೇತರ ವೃಂದದವರು ಸಹಕರಿಸಿದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ

Suddi Udaya

ಅಳದಂಗಡಿ ಹಿಂದೂ ಯುವ ಶಕ್ತಿ ಆಲಡ್ಕ ಕ್ಷೇತ್ರ, ರಾಜಕೀಯ ರಹಿತ ಸಾಮಾಜಿಕ ಸೇವಾ ಸಂಘಟನೆಯ ನೂತನ ಪ್ರದಾನ ಕಚೇರಿ ಉದ್ಘಾಟನೆ

Suddi Udaya

ಬಳಂಜ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಪ್ಲೇಟ್ ಇಡುವ ಸ್ಟ್ಯಾಂಡ್ ಕೊಡುಗೆ

Suddi Udaya

ಧಮ೯ಸ್ಥಳ ಶರಾವತಿ ವಸತಿ ಗೃಹದ ಎದುರು ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿ: ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತ್ಯು

Suddi Udaya

ನೆರಿಯ ಸೆಂಟ್ ತೋಮಸ್ ಬ್ಯಾಂಡ್ ಸೆಟ್ ಮಾಸ್ಟರ್ ಬೇಬಿ ತಚ್ಚಾಟ್ ಹೃದಯಾಘಾತದಿಂದ ನಿಧನ

Suddi Udaya

ವೇಣೂರು : ದಿ| ಸತೀಶ್ ಆಚಾರ್ಯ ರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya
error: Content is protected !!