22.9 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಉಜಿರೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ ಭಾಸ್ಕರ ಆಚಾರ್ಯ ವಿಧಿವಶ

ಉಜಿರೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ ಭಾಸ್ಕರ ಆಚಾರ್ಯ( 80ವರ್ಷ) ಉಜಿರೆ ಅವರು ಅಲ್ಪಕಾಲದ ಅಸೌಖ್ಯದಿಂದ ಜು.6 ರಂದು ಬೆಳಿಗ್ಗೆ ನಿಧನರಾದರು.

ವೃತ್ತಿಯಲ್ಲಿ ವಾಹನ ಮತ್ತು ಪಂಪ್ ಸೆಟ್ ಮೆಕ್ಯಾನಿಕ್ ಆಗಿ ಸ್ಥಳೀಯವಾಗಿ ಹೆಸರುವಾಸಿಯಾಗಿದ್ದ ಇವರು ಅಯೋಧ್ಯಾ ಶ್ರೀ ರಾಮ ಮಂದಿರ ಹೋರಾಟದ ಸಂದರ್ಭದಲ್ಲಿ ಕರ್ನಾಟಕದಿಂದ ಹೋದ ರಾಮಶಿಲಾಪೂಜನ ರಥದೊಂದಿಗೆ ಅಯೋಧ್ಯೆ ತಲುಪಿದ್ದ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕರಾಗಿದ್ದರು. ಸಂಘದ ಶಾಖೆಯಲ್ಲಿ ಸುಶ್ರಾವ್ಯವಾಗಿ ಹಾಡು ಹೇಳಿ ಕೊಡುತ್ತಿದ್ದ, ಪಥ ಸಂಚಲನದಲ್ಲಿ ಶಂಖವಾದಕರಾಗಿ ಭಾಗವಹಿಸುತ್ತಿದ್ದ, ರಾಷ್ಟ್ರವಾದಿಯಾಗಿ, ತನ್ನ ಜೀವಿತಾವಧಿ ಪೂರ್ತಿ ಸಕ್ರಿಯವಾಗಿ ಸಮಾಜ ಸೇವೆಯಲ್ಲಿ ಪಾಲ್ಗೊಂಡಿದ್ದರು.

ಮೃತರು ಪತ್ನಿ ಶಾರದಾ, ಓರ್ವೆ ಪುತ್ರಿ, ಈರ್ವರೂ ಪುತ್ರರಾದ ಲವ ಕುಮಾರ್ ಮತ್ತು ಕುಶ ಕುಮಾರ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಶ್ರೀ ಕ್ಷೇತ್ರ ತೆಕ್ಕಾರಿಗೆ ಶಾಸಕ ಹರೀಶ್ ಪೂಂಜಾ ಭೇಟಿ : ಕ್ಷೇತ್ರದ ರಸ್ತೆಗೆ ಶಾಸಕರ ನಿಧಿಯಿಂದ ರೂ‌.10 ಲಕ್ಷ ಡಾಂಬರೀಕರಣ

Suddi Udaya

ಮಾ14-15 ಎಸ್.ಡಿ.ಎಂ ಝೇಂಕಾರ ಉತ್ಸವ: ಖ್ಯಾತ ನಟ ರಮೇಶ್ ಅರವಿಂದ್ ವಿಶೇಷ ಆಕರ್ಷಣೆ

Suddi Udaya

ಕೊಡಂಗೆ ನಿವಾಸಿ ರಾಧಾ ಗೋಖಲೆ ನಿಧನ

Suddi Udaya

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

Suddi Udaya

 ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಶಾಲೆಯ ಗೈಡ್ಸ್  ದ್ವಿತೀಯ ಸ್ಥಾನ

Suddi Udaya

ಜೂ.14: ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!