July 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಉಜಿರೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ ಭಾಸ್ಕರ ಆಚಾರ್ಯ ವಿಧಿವಶ

ಉಜಿರೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ ಭಾಸ್ಕರ ಆಚಾರ್ಯ( 80ವರ್ಷ) ಉಜಿರೆ ಅವರು ಅಲ್ಪಕಾಲದ ಅಸೌಖ್ಯದಿಂದ ಜು.6 ರಂದು ಬೆಳಿಗ್ಗೆ ನಿಧನರಾದರು.

ವೃತ್ತಿಯಲ್ಲಿ ವಾಹನ ಮತ್ತು ಪಂಪ್ ಸೆಟ್ ಮೆಕ್ಯಾನಿಕ್ ಆಗಿ ಸ್ಥಳೀಯವಾಗಿ ಹೆಸರುವಾಸಿಯಾಗಿದ್ದ ಇವರು ಅಯೋಧ್ಯಾ ಶ್ರೀ ರಾಮ ಮಂದಿರ ಹೋರಾಟದ ಸಂದರ್ಭದಲ್ಲಿ ಕರ್ನಾಟಕದಿಂದ ಹೋದ ರಾಮಶಿಲಾಪೂಜನ ರಥದೊಂದಿಗೆ ಅಯೋಧ್ಯೆ ತಲುಪಿದ್ದ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕರಾಗಿದ್ದರು. ಸಂಘದ ಶಾಖೆಯಲ್ಲಿ ಸುಶ್ರಾವ್ಯವಾಗಿ ಹಾಡು ಹೇಳಿ ಕೊಡುತ್ತಿದ್ದ, ಪಥ ಸಂಚಲನದಲ್ಲಿ ಶಂಖವಾದಕರಾಗಿ ಭಾಗವಹಿಸುತ್ತಿದ್ದ, ರಾಷ್ಟ್ರವಾದಿಯಾಗಿ, ತನ್ನ ಜೀವಿತಾವಧಿ ಪೂರ್ತಿ ಸಕ್ರಿಯವಾಗಿ ಸಮಾಜ ಸೇವೆಯಲ್ಲಿ ಪಾಲ್ಗೊಂಡಿದ್ದರು.

ಮೃತರು ಪತ್ನಿ ಶಾರದಾ, ಓರ್ವೆ ಪುತ್ರಿ, ಈರ್ವರೂ ಪುತ್ರರಾದ ಲವ ಕುಮಾರ್ ಮತ್ತು ಕುಶ ಕುಮಾರ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಕಲ್ಮಂಜ: ಸಿದ್ದಬೈಲು ಪರಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

Suddi Udaya

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತಾಲೂಕು ಮಟ್ಟದ ಖೋ-ಖೋ ಸ್ಪರ್ಧೆ: ನಡ ಸರಕಾರಿ ಪಿ.ಯು. ಕಾಲೇಜು ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಚಾರ್ಮಾಡಿ: ಇರ್ಫಾನ್ ಅಸೌಖ್ಯದಿಂದ ನಿಧನ

Suddi Udaya

ಕನ್ಯಾಡಿ ಶ್ರೀರಾಮ ಸಂಸ್ಥಾನಮ್‌ನ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರ ಹರಿದ್ವಾರದ ಸಾಧನಾ ಕುಟೀರದ 9ನೇ ವಾರ್ಷಿಕೋತ್ಸವ

Suddi Udaya

ಶಿಶಿಲ : ಕಂಚಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya
error: Content is protected !!