July 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಹಮ್ಮದ್ ಹಫೀಝ್ 100ನೇ ದಿನದ ಸ್ಮರಣಾರ್ಥ ಎಸ್.ಬಿ.ಎಸ್ ಕುಂಟಿನಿ ಮದರಸ ವತಿಯಿಂದ ರಕ್ತದಾನ ಶಿಬಿರ

ಲಾಯಿಲ: ಅಲ್ ಬುಖಾರಿ ಜುಮ್ಮಾ ಮಸ್ಜಿದ್ ಕುಂಟಿನಿ ಮತ್ತು ಎಸ್.ಬಿ.ಎಸ್. ಕುಂಟಿನಿ ಮದರಸ ವತಿಯಿಂದ ಎನಾಪೋಯ ಮೆಡಿಕಲ್ ಕಾಲೇಜ್ ಆಸ್ಪತ್ರೆ ಇವರ ಸಹಕಾರದೊಂದಿಗೆ ಅಕಾಲಿಕವಾಗಿ ಅಗಲಿದ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸದ ವಿದ್ಯಾರ್ಥಿ ಮುಹಮ್ಮದ್ ಹಫೀಝ್ 100ನೇ ದಿನದ ಸ್ಮರಣಾರ್ಥ ಜು. 5ರಂದು ಕುಂಟಿನಿ ಮದ್ರಸ ವಠಾರದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು.

ಶಿಬಿರದ ಉದ್ಘಾಟನೆಯನ್ನು ಅಲ್ ಬುಖಾರಿ ಜುಮಾ ಮಸ್ಜಿದ್ ಖತೀಬರಾದ ಶರೀಫ್ ಸುಲ್ತಾನಿ ಸಖಾಫಿ ವಹಿಸಿದರು. ಅಧ್ಯಕ್ಷತೆಯನ್ನು ಕೇಂದ್ರ ಮಸೀದಿ ಅಧ್ಯಕ್ಷ ಅಬೂಬಕ್ಕರ್ ಸುಪ್ರಿಮ್‌ ನೆರವೇರಿಸಿದರು.
ಶಿಬಿರದಲ್ಲಿ ಹಲವಾರು ದಾನಿಗಳು ರಕ್ತದಾನ ಮಾಡಿದರು. ಒಟ್ಟು 53 ಯುನಿಟ್ ರಕ್ತ ಸಂಗ್ರಹಣೆ ಮಾಡಲಾಯಿತು. ವೇದಿಕೆಯಲ್ಲಿ ಅಲ್‌ಬುಖಾರಿ ಜುಮಾ ಮಸ್ಜಿದ್ ಅಧ್ಯಕ್ಷ ಅಶ್ರಫ್, ಕಾರ್ಯದರ್ಶಿ ರವೂಫ್, ಮಾಜಿ ಅಧ್ಯಕ್ಷ ಇಸ್ಮಾಯಿಲ್ ಸನಾ, ಮಾಜಿ ಕಾರ್ಯದರ್ಶಿಯೂಸುಫ್ ಬಾಬ, ಕೇಂದ್ರ ಮಸೀದಿ ಕಾರ್ಯದರ್ಶಿ ಆರಿಸ್ ಏ ಟು ಝೆಡ್, ಎಂಗ್‌ಮೆನ್ಸ್ ಅಧ್ಯಕ್ಷ ಶಾಕಿರ್, ಮುಹಿಯುದ್ದೀನ್ ಸೆಕೆಂಡರಿ ಮದ್ರಸ ಕುಂಟಿನಿ ಇದರ ಸದರ್ ಉಸ್ತಾದರಾದ ಫಾರೂಕ್ ಸಅದಿ, ಮುಅಲ್ಲಿಮರುಗಳಾದ ಇಬ್ರಾಹಿಂ ಅಲ್ ಫುರ್ಕಾಣಿ, ನೌಷದ್ ಸಅದಿ ದಿಡುಪೆ ಎನಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ ಡಾಕ್ಟರ್ ಸಿದ್ದಾರ್ಥ್ ಉಪಸ್ಥಿತರಿದ್ದರು. ಕಾರ್ಯಕ್ರಮ ಆಸಿರ್ ಕುಂಟಿನಿ ನಿರೂಪಿಸಿ ವಂದಿಸಿದರು.

Related posts

ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಕಾರ್ಯಾಗಾರ

Suddi Udaya

ಆ.22: ಬೆಳ್ತಂಗಡಿಯಲ್ಲಿ ಹೋಟೆಲ್ ಶ್ರೀದೇವಿ ಶುಭಾರಂಭ

Suddi Udaya

ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಕಿಂಡಿ ಅಣೆಕಟ್ಟುಗಳಿಗೆ ಜೋಡಿಸಿದ್ದ ಹಲಗೆಗಳ ತೆರವು ಕಾರ್ಯ

Suddi Udaya

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!