23.6 C
ಪುತ್ತೂರು, ಬೆಳ್ತಂಗಡಿ
August 22, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು: ಸಹೋದರರಿಬ್ಬರಿದ್ದ ಬೈಕ್ ಗೆ ಗೂಡ್ಸ್ ರಿಕ್ಷಾ ಡಿಕ್ಕಿ: ಓರ್ವ ಸ್ಥಳದಲ್ಲೇ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

ವೇಣೂರು: ದ್ವಿಚಕ್ರ ವಾಹನಕ್ಕೆ ಗೂಡ್ಸ್ ರಿಕ್ಷಾ ಡಿಕ್ಕಿಯೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ವೇಣೂರು ಪೊಲೀಸ್‌ ಠಾಣಾ ವ್ಯಾಪ್ತಿಯ ರಾಜ್ಯ ಹೆದ್ದಾರಿ ನಿಟ್ಟಡೆ ಬಳಿ ಜು. 5ರ ರಾತ್ರಿ ನಡೆದಿದೆ.

ವೇಣೂರು ಗ್ರಾ.ಪಂ. ವ್ಯಾಪ್ತಿಯ ಕರಿಮಣೇಲು ಗ್ರಾಮದ ಗಾಂಧಿನಗರ ತಿಮರಡ್ಡ ಮನೆ ನಿವಾಸಿ ರವೀಂದ್ರ ಮೂಲ್ಯ (47ವ) ಈ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಮತ್ತೋರ್ವ ಸಹೋದರ ಜಗದೀಶ್ ಮೂಲ್ಯ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಹಿನ್ನೆಲೆ:
ಗಾರೆ ಕೆಲಸ ಮಾಡಿಕೊಂಡಿದ್ದ ಸಹೋದರರು ಕೆಲಸ ಮುಗಿಸಿ ದ್ವಿಚಕ್ರ ವಾಹನದಲ್ಲಿ ಗುರುವಾಯನಕೆರೆಯಿಂದ ವೇಣೂರು ಕಡೆಗೆ ಬರುತ್ತಿದ್ದ ವೇಳೆ ವೇಣೂರಿನಿಂದ ಹೋಗುತ್ತಿದ್ದ ಗೂಡ್ಸ್ ರಿಕ್ಷಾ ನಿಟ್ಟಡೆಯ ಕುಂಭಶ್ರೀ ಶಾಲಾ ಬಳಿ ಮುಖಾಮುಖಿ ಡಿಕ್ಕಿಯೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಪಲ್ಟಿಯಾಗಿದ್ದು, ರವೀಂದ್ರ ಮೂಲ್ಯ ಅವರ ತಲೆಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದರೆ. ಜಗದೀಶ್ ಮೂಲ್ಯ ಅವರಿಗೆ ಕಾಲುಗಳಿಗೆ ಬಲವಾದ ಗಾಯಗಳಾಗಿವೆ. ರಿಕ್ಷಾ ಚಾಲಕ ಹಾಗೂ ಸ್ಥಳೀಯರು ಸೇರಿ ಗಾಯಾಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾಗಿದ್ದಾರೆ.

ವೇಣೂರಿನಲ್ಲಿ ತರಕಾರಿ ಅಂಗಡಿ ನಡೆಸುತ್ತಿರುವ ಪುತ್ತುಮೋನು ಎಂಬವರ ಗೂಡ್ಸ್ ರಿಕ್ಷಾ ಆಗಿದ್ದು, ರಾತ್ರಿ ಅಂಗಡಿಯಿಂದ ಕೆಲಸ ಮುಗಿಸಿ ಮನೆಗೆ ಕಡೆಗೆ ತೆರಳುತ್ತಿದ್ದು, ನಿಟ್ಟಡೆಯಲ್ಲಿ ಹೆದ್ದಾರಿಯಲ್ಲಿದ್ದ ಸಣ್ಣ ಗುಂಡಿಯೊಂದನ್ನು ತಪ್ಪಿಸುವ
ಈ ದುಘ೯ಟನೆ ನಡೆದಿದೆ ಎನ್ನಲಾಗಿದೆ.
ಮೃತ ರವೀಂದ್ರ ಅವರು ತಾಯಿ ಬಾಗಿ, ಪತ್ನಿ ಭವಾನಿ, ಪುತ್ರ ಸ್ವಸ್ತಿಕ್, ಸಹೋದರರು, ಸಹೋದರಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸೇವಾ ನಿವೃತ್ತಿ; ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ಶುಭಹಾರೈಕೆ

Suddi Udaya

ಮುಳಿಯದಲ್ಲಿ ದೀಪಾವಳಿ ಸಂಭ್ರಮ: ವಜ್ರಾಭರಣ ಖರೀದಿಗೆ ಕಾರು ಗೆಲ್ಲುವ ಅವಕಾಶ- ಗ್ರಾಹಕರಿಗೆ ವಿಶೇಷ ಕೊಡುಗೆ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಬೆಳಾಲು: ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಬೈಕಿನಲ್ಲಿದ್ದವರು ಅದೃಷ್ಟವಾಶಾತ್ ಪಾರು

Suddi Udaya

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಮಿತ್ತಬಾಗಿಲು ಸುಜ್ಞಾನ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya
error: Content is protected !!