23.6 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ “POCSO ಕಾಯ್ದೆ ಜಾಗೃತಿ” ಕಾರ್ಯಕ್ರಮ

ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನ ಸಭಾಂಗಣದಲ್ಲಿ ಮಕ್ಕಳ ಲೈಂಗಿಕ ದೌರ್ಜನ್ಯದಿಂದ ರಕ್ಷಣೆ ಕಾಯ್ದೆ – POCSO Act, 2012 ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಭ್ಯಾಸ್ ಪಿ.ಯು ಕಾಲೇಜಿನ ಅಧ್ಯಕ್ಷ ಕಾರ್ತಿಕೇಯ ಎಂ.ಎಸ್ ಅವರು ವಹಿಸಿಕೊಂಡಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶ್ರೀಮತಿ. ಶ್ರದ್ಧಾ ಶೆಟ್ಟಿ ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.

ಮಂಗಳೂರಿನ ತತ್ವಸಿದ್ಧ ಸಂಸ್ಥೆಯ ಸ್ಥಾಪಕಿ ಹಾಗೂ ಹಿರಿಯ ವಕೀಲರಾದ ಶ್ರೀಮತಿ.ಶ್ರದ್ಧಾ ಶೆಟ್ಟಿ ಅವರು, POCSO ಕಾಯ್ದೆಯ ಮಹತ್ವವನ್ನು ವಿವರಿಸಿದರು. “18 ವರ್ಷದೊಳಗಿನ ಪ್ರತಿಯೊಬ್ಬ ಮಗು POCSO ಕಾಯ್ದೆಯ ವ್ಯಾಪ್ತಿಗೆ ಬರುತ್ತದೆ. ಮಗುವಿನ ಮೇಲೆ ನಡೆಯುವ ಯಾವುದೇ ರೀತಿಯ ಲೈಂಗಿಕ ದೌರ್ಜನ್ಯ, ಕಿರುಕುಳ ಅಥವಾ ಅಶ್ಲೀಲ ಚಿತ್ರಣವು ಗಂಭೀರ ಅಪರಾಧ. ಈ ಕಾಯ್ದೆಯಡಿ ಕಠಿಣ ಶಿಕ್ಷೆಗಳಿವೆ. ‘Good Touch, Bad Touch’ ಬಗ್ಗೆ ಅರಿವು ಮೂಡಿಸಿಕೊಂಡು, ಸುರಕ್ಷಿತವಾಗಿ ಮತ್ತು ಆತ್ಮವಿಶ್ವಾಸದಿಂದ ಇರಬೇಕು” ಎಂದು ವಿದ್ಯಾರ್ಥಿಗಳೊಂದಿಗೆ ಮುಕ್ತ ಸಂವಾದ ನಡೆಸಿದರು.

ಕಾರ್ಯಕ್ರಮದ ಅಧ್ಯಕ್ಷ ಕಾರ್ತಿಕೇಯ ಎಂ.ಎಸ್ ಅವರು ಮಾತನಾಡಿ, “ಮಕ್ಕಳ ಸುರಕ್ಷತೆ ಎಂಬುದು ಶಾಲೆ, ಮನೆ ಮತ್ತು ಸಮಾಜದ ಜಂಟಿ ಜವಾಬ್ದಾರಿ. ನಿಮ್ಮ ದೇಹ, ನಿಮ್ಮ ಮಿತಿ ಬಗ್ಗೆ ಅರಿವು ಇರಬೇಕು. ಯಾವುದೇ ರೀತಿಯ ಅನುಮಾನ ಅಥವಾ ಭಯವಿದ್ದರೆ ಶಿಕ್ಷಕರು, ಪೋಷಕರು ಅಥವಾ ಪೊಲೀಸರ ಬಳಿ ನಿರ್ಭಯವಾಗಿ ಹೇಳಬೇಕು. ಮೌನವಾಗಿರುವುದೇ ದೊಡ್ಡ ಅಪಾಯ” ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಅಭ್ಯಾಸ್ ಸಂಸ್ಥೆಯ ಕಾರ್ಯದರ್ಶಿ ಶಿಲ್ಪಾ ಆರ್ ಮತ್ತು ಆಡಳಿತ ಅಧಿಕಾರಿ ಪ್ರಮೋದ್ ಗೌಡ ಹಾಗೂ ಪ್ರಾಂಶುಪಾಲರಾದ ದೀಪಕ್ ಕೆ. ಎಸ್ , ಪಿ. ಆರ್. ಓ ರಾದ ಧನಂಜಯ ಹಾಗೂ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು, ಸಹಾಯಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕ ಸುಧೀರ್ ನಿರೂಪಿಸಿದರು. ಹಿಂದಿ ವಿಭಾಗದ ಉಪನ್ಯಾಸಕಿ ಜೋಸೆಫಿನ್ ಸ್ವಾಗತಿಸಿದರು. ವಿದ್ಯಾರ್ಥಿನಿ ಸ್ವಸ್ತಿ ಶ್ರೀ ಹೆಬ್ಬಾರ್ ಪ್ರಾರ್ಥನೆಗೈದರು. ಜೀವಶಾಸ್ತ್ರ ವಿಭಾಗದ ಉಪನ್ಯಾಸಕ ಚೆನ್ನಬಸವ ವಂದನಾರ್ಪಣೆ ಮಾಡಿದರು.

Related posts

ಆಪರೇಷನ್ ಸಿಂಧೂರ: ಕುರಾಯ-ಬಂದಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಹರೀಶ್ ಕುಮಾರ್ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಉದ್ಘಾಟನೆ

Suddi Udaya

ಪಡಂಗಡಿ ಗ್ರಾ.ಪಂ. ಗ್ರಂಥಾಲಯಕ್ಕೆ ಪ್ರವೀಣ್ ರೈ ರವರಿಂದ 54 ಪುಸ್ತಕಗಳ ಕೊಡುಗೆ

Suddi Udaya

ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದ ಬೈಕ್ ವಿರುದ್ಧ ಪ್ರಕರಣ ದಾಖಲು

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!