July 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಪುಚಿನ್ ಕೃಷಿಕಾ ಸೇವಾ ಕೇಂದ್ರ ಮತ್ತು ವಿಮುಕ್ತಿ ಸ್ವ ಸಹಾಯ ಸಂಘಗಳ ವತಿಯಿಂದ ವಿದ್ಯಾಸ್ನೇಹಿ ಬಡ್ಡಿರಹಿತ ಶಿಕ್ಷಣ ಸಾಲ ವಿತರಣೆ

ಲಾಯಿಲ: ಕಪುಚಿನ್ ಕೃಷಿಕಾ ಸೇವಾ ಕೇಂದ್ರ ಮತ್ತು ವಿಮುಕ್ತಿ ಸ್ವ ಸಹಾಯ ಸಂಘಗಳ ವತಿಯಿಂದ 7ನೇ ವರ್ಷದ ವಿದ್ಯಾಸ್ನೇಹಿ ಬಡ್ಡಿರಹಿತ ಶಿಕ್ಷಣ ಸಾಲ ವಿತರಣಾ ಕಾರ್ಯಕ್ರಮವು ಜು.5 ರಂದು ವಿಮುಕ್ತಿ ಸಭಾಭವನದಲ್ಲಿ ನಡೆಯಿತು.

ಸಂಸ್ಥೆಯ ನಿರ್ದೇಶಕರಾದ ಫಾ.ವಿನೋದ್ ಮಸ್ಕರೇನಸ್‌ರವರು ಸಂವಿಧಾನದ ಪುಸ್ತಕಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಳೆದ 7 ವರ್ಷಗಳ ವಿದ್ಯಾಸ್ನೇಹಿಯ ಪಯಣದ ಹಾದಿಯನ್ನು ಸಹ ನಿರ್ದೇಶಕರಾದ ಫಾ ರೋಹನ್ ಲೋಬೋರವರು ವಿವರಿಸಿದರು. ಸಂಸ್ಥೆಯ ನಿರ್ದೇಶಕರು ವಿದ್ಯಾರ್ಥಿಗಳಿಗೆ ಸಮುದಾಯದ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮುದಾಯದಲ್ಲಿರುವ ಅಸಹಾಯಕ ಹಾಗೂ ಬಡ ಜನರಿಗೆ ಸಹಾಯ ಮಾಡುವ ಮನೋಭಾವವನ್ನು ಬೆಳೆಸಿಕೊಳ್ಳಬೇಕೆಂದು ತಿಳಿಸುತ್ತಾ ಅವರ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು.

ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಶಾಲಿ ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ತಮ್ಮ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳುವಂತೆ ಪ್ರೇರೇಪಿಸಿದರು ಹಾಗೂ ಉಪಾಧ್ಯಕ್ಷೆ ಶಶಿಕಲಾ ಸಂಸ್ಥೆಯ ಕಾರ್ಯ ವೈಖರಿಯನ್ನು ಶ್ಲಾಘಿಸಿದರು. ಒಟ್ಟು 31 ವಿದ್ಯಾರ್ಥಿಗಳಿಗೆ ಸುಮಾರು 8,91,000 ರೂಪಾಯಿಗಳ ಶೈಕ್ಷಣಿಕ ಬಡ್ಡಿರಹಿತ ಸಾಲದ ಮೊತ್ತವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಸಹ ನಿರ್ದೇಶಕರಾದ ಫಾ ರೋಹನ್ ಲೋಬೋ, ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಂಸ್ಥೆಯ ಕಾರ್ಯಕರ್ತೆ ಶ್ರೀಮತಿ ಮೋಹಿನಿಯವರು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ ಶಾಲೆಗೆ ಟೇಬಲ್ ಕೊಡುಗೆ

Suddi Udaya

ಬೆಳ್ತಂಗಡಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ: ಎಚ್ಚರ ವಹಿಸುವಂತೆ ಶಾಸಕ ಹರೀಶ್ ಪೂಂಜ‌ ಮನವಿ: ತುರ್ತು ಸಂದರ್ಭಗಳಲ್ಲಿ‌ ಸಹಾಯವಾಣಿ ಸಂಪರ್ಕಿಸಲು ಸೂಚನೆ

Suddi Udaya

ನಾಳ ದೇವಸ್ಥಾನದಲ್ಲಿ ಯಕ್ಷಗಾನ ಬಯಲಾಟ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಣೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಜೇಮ್ಸ್ ಪಟ್ಟೇರಿಲ್ ರವರಿಗೆ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದಿಂದ ಗೌರವಾರ್ಪಣೆ

Suddi Udaya

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya
error: Content is protected !!