ಬೆಳ್ತಂಗಡಿ: ಜೆಸಿಐ ಬೈಂದೂರು ಸಿಟಿ ಆತಿಥ್ಯದಲ್ಲಿ ನಡೆದ ಲೇಡಿ ಜೆಸಿ ಹಾಗೂ ಜೂನಿಯರ್ ಜೆಸಿ ಸಮ್ಮೇಳನ ‘ಸಿಂಧು’ ಕಾರ್ಯಕ್ರಮದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕದ ಜೂನಿಯರ್ ಜೆಸಿ ವಿಭಾಗಕ್ಕೆ ಯುವ ಪುರಸ್ಕಾರ ಪ್ರಶಸ್ತಿ ಲಭಿಸಿದೆ.
ಬೈಂದೂರಿನಲ್ಲಿ ನಡೆದ ವಲಯ 15ರ ಸಮ್ಮೇಳನದಲ್ಲಿ ವಲಯಾಧ್ಯಕ್ಷ ಸಂತೋಷ್ ಶೆಟ್ಟಿ ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಇದೇ ಸಂದರ್ಭದಲ್ಲಿ ಘಟಕದ ನಿಕಟಪೂರ್ವ ಅಧ್ಯಕ್ಷ ಡಾ. ಶೋಭಾ ಪಿ., ಪೂರ್ವಾಧ್ಯಕ್ಷರಾದ ಕೆ ಶ್ರೀಧರ ರಾವ್, ಸಂತೋಷ್ ಜೈನ್, ಕಾರ್ಯದರ್ಶಿ ಜೋಯಲ್ ಪಿರೇರಾ, ವಲಯ ಉಪಾಧ್ಯಕ್ಷರಾದ ಜಿತೇಶ್ ಎಲ್ ಪಿರೇರಾ, ಕಪಿಲಾವಾಣಿ ಸಂಪಾದಕರಾದ ಜಸ್ವಂತ್ ಪಿರೇರಾ ಮತ್ತು ದಕ್ಷಾ ಜೈನ್ ಅವರು ಉಪಸ್ಥಿತರಿದ್ದರು.














