22.9 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಣ್ಣೀರುಪಂತ: ಪಾಲೇದುವಿನ ಡಾ. ಸ್ವಾತಿಕ್‌ರಿಗೆ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ಪದವಿ

ಬೆಳ್ತಂಗಡಿ: ಕೂಲಿ ಕಾರ್ಮಿಕೆಯ ಪುತ್ರ ಡಾ. ಸ್ವಾತಿಕ್ ಪಿ.ಟಿ. ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ಫಿಸಿಯೋಥೆರಪಿಯಲ್ಲಿ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ಪದವಿ ಪಡೆದು ಸಾಧನೆಗೈದಿದ್ದಾರೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ಪಾಲೇದು ಸಮೀಪದ ಕೊಲ್ಯೆತ್ಯಾರು ನಿವಾಸಿ ಉಷಾ-ಪುರುಷೋತ್ತಮ ಪೂಜಾರಿ ದಂಪತಿಗಳ ಕಿರಿಯ ಪುತ್ರ ಡಾ.ಸಾತ್ವಿಕ್ ಪಿ.ಟಿ.

ಬಡಕುಟುಂಬದವಾರಗಿದ್ದು ಆರ್ಥಿಕ ಸಂಕಷ್ಟದ ನಡುವೆಯೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಘಟಿಕೋತ್ಸವದಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಸ್ಪೂರ್ತಿಯಾಗಿದ್ದಾರೆ. ಅದರಲ್ಲೂ ನ್ಯೂರೋ ಫಿಸಿಯೋಥೆರಪಿ ವಿಷಯದಲ್ಲಿ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಶಾಲೆ ಪಾಲೇದುವಿನಲ್ಲಿ, ಪ್ರೌಢ ಶಿಕ್ಷಣವನ್ನು ಮೊರಾರ್ಜಿ ದೇಸಾಯಿ ಮಚ್ಚಿನ, ಪುಂಜಾಲಕಟ್ಟೆ ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ನಡೆಸಿ ಹಾಗೂ ಉನ್ನತ ಶಿಕ್ಷಣವನ್ನು ಲಕ್ಷ್ಮೀ ಕಾಲೇಜಿನಲ್ಲಿ ಪೂರೈಸಿದ್ದಾರೆ.

ತಾಯಿ-ತಂದೆ ಕೂಲಿ ಕಾರ್ಮಿಕರಾಗಿದ್ದು ಮಗನ ಭವಿಷ್ಯಕ್ಕೆ ತಾಯಿ ಉಷಾ ಆಸರೆಯಾಗಿ ನಿಂತು, ಮನೆಯ ಆರ್ಥಿಕ ಸಂಕಷ್ಟದ ನಡುವೆ ತಾನು ಕಲಿಯದಿದ್ದರೂ ತನ್ನ ಮಗ ವಿದ್ಯಾರ್ಜನೆಯಿಂದ ವಂಚಿತರಾಗಬಾರದು ಎಂದು ತನ್ನ ದುಡಿಮೆ ಮೂಲಕ ಮಗನ ಶಿಕ್ಷಣಕ್ಕೆ ಉತ್ತೇಜನ ನೀಡಿ ತಾಯಿಗೆ ಮಗನ ಸಾಧನೆ ಕಂಡು ಹರ್ಷ ವ್ಯಕ್ತಪಡಿಸಿದ್ದಾರೆ.

ಶಿಕ್ಷಣದ ನಡುವೆ ಬಿಡುವಿನ ಸಮಯ ಇತರ ಕೆಲಸಕ್ಕೆ ಹೋಗಿ, ಸಾಧನೆಯ ಛಲ ಮತ್ತು ಸರ್ಕಾರಿ ಹಾಗೂ ಖಾಸಗಿ ವಿದ್ಯಾರ್ಥಿವೇತನಗಳ ಹಾಗೂ ಆಪ್ತರ ನೆರವಿನಿಂದ ಹಾಗೂ ನನ್ನ ತಾಯಿಯ ದೊಡ್ಡ ಕೊಡುಗೆಯಿಂದ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ಪದವಿ ಗಳಿಸಲು ಸಹಕಾರಿಯಾಗಿದೆ, ಮುಂದೆ ಒಂದು ವರ್ಷ ಕೆಲಸ ಮಾಡಿ ಬಳಿಕ ಆರ್ಥೋಪೆಡಿಕ್ ಪಿಸಿಯೋಥೆರಪಿಯಲ್ಲಿ ಸಾತ್ನಕೊತ್ತರ ಪದವಿ ಪಡೆಬೇಕೆಂಬ ಆಕ್ಷಾಂಕ್ಷೆ ಇದೆ ಎನ್ನುತ್ತಾರೆ ಡಾ.ಸಾತ್ವಿಕ್ ಪಿ.ಟಿ.

Related posts

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ

Suddi Udaya

“ನಾರಿ ಇನ್ ಪಿಂಕ್ ಸಾರಿ” ಕ್ಯಾನ್ಸರ್ ಜಾಗೃತಿ ಜಾಥಾ ಮತ್ತು ಕ್ಯಾನ್ಸರ್ ಮಾಹಿತಿ ಕಾರ್ಯಕ್ರಮಕ್ಕೆ ಜೆಸಿಐ ಭಾರತದಿಂದ ಬೆಳ್ತಂಗಡಿ ಜೆಸಿಐ ಗೆ ವಿಶೇಷ ಮನ್ನಣೆ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಮತ್ತು ಸಾಂಕ್ರಾಮಿಕ ರೋಗಗಳಿಂದ ಸುರಕ್ಷತಾ ಜಾಗೃತಿ

Suddi Udaya

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

Suddi Udaya

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

Suddi Udaya

ಮಾಲಾಡಿ ಶಕ್ತಿ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದ ಕು| ಅನನ್ಯಾ ರಿಗೆ ಸನ್ಮಾನ

Suddi Udaya
error: Content is protected !!