July 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಣ್ಣೀರುಪಂತ: ಪಾಲೇದುವಿನ ಡಾ. ಸ್ವಾತಿಕ್‌ರಿಗೆ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ಪದವಿ

ಬೆಳ್ತಂಗಡಿ: ಕೂಲಿ ಕಾರ್ಮಿಕೆಯ ಪುತ್ರ ಡಾ. ಸ್ವಾತಿಕ್ ಪಿ.ಟಿ. ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ಫಿಸಿಯೋಥೆರಪಿಯಲ್ಲಿ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ಪದವಿ ಪಡೆದು ಸಾಧನೆಗೈದಿದ್ದಾರೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ಪಾಲೇದು ಸಮೀಪದ ಕೊಲ್ಯೆತ್ಯಾರು ನಿವಾಸಿ ಉಷಾ-ಪುರುಷೋತ್ತಮ ಪೂಜಾರಿ ದಂಪತಿಗಳ ಕಿರಿಯ ಪುತ್ರ ಡಾ.ಸಾತ್ವಿಕ್ ಪಿ.ಟಿ.

ಬಡಕುಟುಂಬದವಾರಗಿದ್ದು ಆರ್ಥಿಕ ಸಂಕಷ್ಟದ ನಡುವೆಯೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಘಟಿಕೋತ್ಸವದಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಸ್ಪೂರ್ತಿಯಾಗಿದ್ದಾರೆ. ಅದರಲ್ಲೂ ನ್ಯೂರೋ ಫಿಸಿಯೋಥೆರಪಿ ವಿಷಯದಲ್ಲಿ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಶಾಲೆ ಪಾಲೇದುವಿನಲ್ಲಿ, ಪ್ರೌಢ ಶಿಕ್ಷಣವನ್ನು ಮೊರಾರ್ಜಿ ದೇಸಾಯಿ ಮಚ್ಚಿನ, ಪುಂಜಾಲಕಟ್ಟೆ ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ನಡೆಸಿ ಹಾಗೂ ಉನ್ನತ ಶಿಕ್ಷಣವನ್ನು ಲಕ್ಷ್ಮೀ ಕಾಲೇಜಿನಲ್ಲಿ ಪೂರೈಸಿದ್ದಾರೆ.

ತಾಯಿ-ತಂದೆ ಕೂಲಿ ಕಾರ್ಮಿಕರಾಗಿದ್ದು ಮಗನ ಭವಿಷ್ಯಕ್ಕೆ ತಾಯಿ ಉಷಾ ಆಸರೆಯಾಗಿ ನಿಂತು, ಮನೆಯ ಆರ್ಥಿಕ ಸಂಕಷ್ಟದ ನಡುವೆ ತಾನು ಕಲಿಯದಿದ್ದರೂ ತನ್ನ ಮಗ ವಿದ್ಯಾರ್ಜನೆಯಿಂದ ವಂಚಿತರಾಗಬಾರದು ಎಂದು ತನ್ನ ದುಡಿಮೆ ಮೂಲಕ ಮಗನ ಶಿಕ್ಷಣಕ್ಕೆ ಉತ್ತೇಜನ ನೀಡಿ ತಾಯಿಗೆ ಮಗನ ಸಾಧನೆ ಕಂಡು ಹರ್ಷ ವ್ಯಕ್ತಪಡಿಸಿದ್ದಾರೆ.

ಶಿಕ್ಷಣದ ನಡುವೆ ಬಿಡುವಿನ ಸಮಯ ಇತರ ಕೆಲಸಕ್ಕೆ ಹೋಗಿ, ಸಾಧನೆಯ ಛಲ ಮತ್ತು ಸರ್ಕಾರಿ ಹಾಗೂ ಖಾಸಗಿ ವಿದ್ಯಾರ್ಥಿವೇತನಗಳ ಹಾಗೂ ಆಪ್ತರ ನೆರವಿನಿಂದ ಹಾಗೂ ನನ್ನ ತಾಯಿಯ ದೊಡ್ಡ ಕೊಡುಗೆಯಿಂದ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ಪದವಿ ಗಳಿಸಲು ಸಹಕಾರಿಯಾಗಿದೆ, ಮುಂದೆ ಒಂದು ವರ್ಷ ಕೆಲಸ ಮಾಡಿ ಬಳಿಕ ಆರ್ಥೋಪೆಡಿಕ್ ಪಿಸಿಯೋಥೆರಪಿಯಲ್ಲಿ ಸಾತ್ನಕೊತ್ತರ ಪದವಿ ಪಡೆಬೇಕೆಂಬ ಆಕ್ಷಾಂಕ್ಷೆ ಇದೆ ಎನ್ನುತ್ತಾರೆ ಡಾ.ಸಾತ್ವಿಕ್ ಪಿ.ಟಿ.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya

ವೇಣೂರು: ಕೃಷಿಕ ಕೆ. ಹಸನಬ್ಬ ನಿಧನ

Suddi Udaya

ಮುಂಡಾಜೆ ಹೈಸ್ಕೂಲಿನಲ್ಲಿ ನಿವೃತ್ತ ಅಧ್ಯಾಪಕರಿಗೆ ಗುರುವಂದನೆ

Suddi Udaya

ಶಿರ್ಲಾಲು: ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಅಶೋಧರ ಸಾಲಿಯಾನ್ ನಿಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸಂಭ್ರಮದ ಪ್ರತಿಭಾ ದಿನಾಚರಣೆ

Suddi Udaya

ಮೊಗ್ರು : ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಯೋಗ ತರಬೇತಿಯಲ್ಲಿ ಮುಗೇರಡ್ಕ ವಿದ್ಯಾಭಿಮಾನಿಗಳು ಭಾಗಿ

Suddi Udaya
error: Content is protected !!