July 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರತಿ ಮಂಗಳವಾರ ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ‘ಗಣಹವನ’ ಸೇವೆ ಆರಂಭ

ಬೆಳ್ತಂಗಡಿ:ಅಳದಂಗಡಿಯ ಪವಿತ್ರವಾದ ಕಾರಣೀಕ ಕ್ಷೇತ್ರವಾದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಕಲ ವಿಘ್ನಗಳ ನಿವಾರಕ ಹಾಗೂ ಇಷ್ಟಾರ್ಥ ಪ್ರದಾತನಾದ ಶ್ರೀ ಮಹಾಗಣಪತಿಯ ದಿವ್ಯ ಸಾನ್ನಿಧ್ಯದಲ್ಲಿ ಪ್ರತಿ ಮಂಗಳವಾರ ವಿಶೇಷ ‘ಗಣಹವನ’ ಸೇವೆಯನ್ನು ಆಯೋಜಿಸಲಾಗಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಶಶಿಧರ ಡೋಂಗ್ರೆ ತಿಳಿಸಿದ್ದಾರೆ.

ಈ ವಿಶೇಷ ಸೇವೆಯ ಮೊದಲ ಕಾರ್ಯಕ್ರಮವು ಜುಲೈ 7, 2026 ಮಂಗಳವಾರ ನಡೆಯಲಿದ್ದು, ಬೆಳಿಗ್ಗೆ ಪ್ರಾರಂಭವಾಗಿ 10 ಗಂಟೆಗೆ ಗಣಹವನದ ಪೂರ್ಣಾಹುತಿ ನೆರವೇರಲಿದೆ. ಪ್ರಥಮ ಗಣಹವನ ಸೇವೆಯನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ. ಶಶಿಧರ ಡೋಂಗ್ರೆ ಹಾಗೂ ಡಾ. ಸುಷ್ಮಾ ಡೋಂಗ್ರೆ ದಂಪತಿ ನೆರವೇರಿಸಲಿದ್ದಾರೆ.

ಗಣಹವನ ಸೇವೆಯಲ್ಲಿ ಭಾಗವಹಿಸುವುದರಿಂದ ಭಕ್ತರು ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತ ಬಂಧುಗಳು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮನವಿ ಮಾಡಿದೆ.

ಗಣಹವನ ಸೇವಾ ದರ: ರೂ. 3,000/- ಮಾತ್ರ. ಸೇವಾರ್ಥಿಗಳು ಹೂ, ಹಣ್ಣು ತರಬೇಕು. ಹವನಕ್ಕೆ ಬೇಕಾದ ಉಳಿದ ಎಲ್ಲ ಸಾಮಾಗ್ರಿಗಳು, ಪುರೋಹಿತರ ವ್ಯವಸ್ಥೆಯನ್ನು ದೇವಸ್ಥಾನದ ವತಿಯಿಂದಲೇ ಮಾಡಲಾಗುವುದು. ಆಸಕ್ತ ಭಕ್ತರು ತಮ್ಮ ಹೆಸರನ್ನು ಕನಿಷ್ಠ ಒಂದು ವಾರ ಮುಂಚಿತವಾಗಿ ದೇವಸ್ಥಾನದ ಕಛೇರಿಯಲ್ಲಿ ನೋಂದಾಯಿಸಿಕೊಂಡು ಸಹಕರಿಸಬೇಕಾಗಿ ಕೋರಿಕೆ.
ಹೆಚ್ಚಿನ ಮಾಹಿತಿಗಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾl ಶಶಿಧರ ಡೋಂಗ್ರೆ- 9448548668 ಹಾಗೂ ಅರ್ಚಕರಾದ ಪ್ರವೀಣ ಮಯ್ಯ – 7483988272 ಇವರನ್ನು ಸಂಪರ್ಕಿಸಬಹುದಾಗಿದೆ.

Related posts

ರೆಖ್ಯ: ನಾಪತ್ತೆಯಾಗಿದ್ದ ಉರ್ನಡ್ಕ ನಿವಾಸಿ ಲೋಕೇಶ್ ರವರ ಮೃತದೇಹ ಪತ್ತೆ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷೆಯಾಗಿ ಅಕ್ಷರ ಪಿ. ಆಯ್ಕೆ

Suddi Udaya

ಇಕೋಫ್ರೆಶ್ ಎಂಟರ್ಪ್ರೈಸಸ್ ಮಾಲಕ ರಾಕೇಶ್ ಹೆಗ್ಡೆಯವರಿಂದ ರೈತರತ್ನ ಪ್ರಶಸ್ತಿ ಪುರಸ್ಕೃತ ಕುತ್ಲೂರು ಶಾಲೆಗೆ ಕಳೆಕೊಚ್ಚುವ ಯಂತ್ರ ಕೊಡುಗೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya
error: Content is protected !!