22.9 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರತಿ ಮಂಗಳವಾರ ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ‘ಗಣಹವನ’ ಸೇವೆ ಆರಂಭ

ಬೆಳ್ತಂಗಡಿ:ಅಳದಂಗಡಿಯ ಪವಿತ್ರವಾದ ಕಾರಣೀಕ ಕ್ಷೇತ್ರವಾದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಕಲ ವಿಘ್ನಗಳ ನಿವಾರಕ ಹಾಗೂ ಇಷ್ಟಾರ್ಥ ಪ್ರದಾತನಾದ ಶ್ರೀ ಮಹಾಗಣಪತಿಯ ದಿವ್ಯ ಸಾನ್ನಿಧ್ಯದಲ್ಲಿ ಪ್ರತಿ ಮಂಗಳವಾರ ವಿಶೇಷ ‘ಗಣಹವನ’ ಸೇವೆಯನ್ನು ಆಯೋಜಿಸಲಾಗಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಶಶಿಧರ ಡೋಂಗ್ರೆ ತಿಳಿಸಿದ್ದಾರೆ.

ಈ ವಿಶೇಷ ಸೇವೆಯ ಮೊದಲ ಕಾರ್ಯಕ್ರಮವು ಜುಲೈ 7, 2026 ಮಂಗಳವಾರ ನಡೆಯಲಿದ್ದು, ಬೆಳಿಗ್ಗೆ ಪ್ರಾರಂಭವಾಗಿ 10 ಗಂಟೆಗೆ ಗಣಹವನದ ಪೂರ್ಣಾಹುತಿ ನೆರವೇರಲಿದೆ. ಪ್ರಥಮ ಗಣಹವನ ಸೇವೆಯನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ. ಶಶಿಧರ ಡೋಂಗ್ರೆ ಹಾಗೂ ಡಾ. ಸುಷ್ಮಾ ಡೋಂಗ್ರೆ ದಂಪತಿ ನೆರವೇರಿಸಲಿದ್ದಾರೆ.

ಗಣಹವನ ಸೇವೆಯಲ್ಲಿ ಭಾಗವಹಿಸುವುದರಿಂದ ಭಕ್ತರು ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತ ಬಂಧುಗಳು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮನವಿ ಮಾಡಿದೆ.

ಗಣಹವನ ಸೇವಾ ದರ: ರೂ. 3,000/- ಮಾತ್ರ. ಸೇವಾರ್ಥಿಗಳು ಹೂ, ಹಣ್ಣು ತರಬೇಕು. ಹವನಕ್ಕೆ ಬೇಕಾದ ಉಳಿದ ಎಲ್ಲ ಸಾಮಾಗ್ರಿಗಳು, ಪುರೋಹಿತರ ವ್ಯವಸ್ಥೆಯನ್ನು ದೇವಸ್ಥಾನದ ವತಿಯಿಂದಲೇ ಮಾಡಲಾಗುವುದು. ಆಸಕ್ತ ಭಕ್ತರು ತಮ್ಮ ಹೆಸರನ್ನು ಕನಿಷ್ಠ ಒಂದು ವಾರ ಮುಂಚಿತವಾಗಿ ದೇವಸ್ಥಾನದ ಕಛೇರಿಯಲ್ಲಿ ನೋಂದಾಯಿಸಿಕೊಂಡು ಸಹಕರಿಸಬೇಕಾಗಿ ಕೋರಿಕೆ.
ಹೆಚ್ಚಿನ ಮಾಹಿತಿಗಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾl ಶಶಿಧರ ಡೋಂಗ್ರೆ- 9448548668 ಹಾಗೂ ಅರ್ಚಕರಾದ ಪ್ರವೀಣ ಮಯ್ಯ – 7483988272 ಇವರನ್ನು ಸಂಪರ್ಕಿಸಬಹುದಾಗಿದೆ.

Related posts

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಿಂದ 274 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ : ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಅಳದಂಗಡಿ: ನೊಚ್ಚ ಮನೆತನದ ಕುವರಿ ನಿಯತಿ ಅಮೇರಿಕಾದಲ್ಲಿ ಯಕ್ಷಗಾನ ನಾಟ್ಯ ಪ್ರದರ್ಶನ

Suddi Udaya

ಶೇ.100 ತೆರಿಗೆ ವಸೂಲಾತಿ: ನಾವೂರು ಗ್ರಾ.ಪಂ. ಗೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿಯವರಿಂದ ಅಭಿನಂದನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!