23.6 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ: ಸ್ವಾಗತ ಸಮಿತಿ ರಚನೆ

ಬೆಳ್ತಂಗಡಿ : ದಾರುಸ್ಸಲಾಂ ಸೆಂಟರ್ ಬೆಳ್ತಂಗಡಿ ಇದರ 10ನೇ ವಾರ್ಷಿಕೋತ್ಸವ ಹಾಗೂ ಪ್ರಥಮ ಸನದುದಾನ ಸಮಾರಂಭವು ಬೆಳ್ತಂಗಡಿ ಶಂಸುಲ್ ಉಲಮಾ ನಗರದಲ್ಲಿ 2026 ಡಿಸೆಂಬರ್ 17 ರಿಂದ 20 ರ ತನಕ “ದಿಶೆ ತೋರಿದ ದಶ ವರ್ಷಗಳು …” ಎಂಬ ಧ್ಯೇಯವಾಕ್ಯದೊಂದಿಗೆ ನಡೆಯಲಿದ್ದು ಇದರ ಸ್ವಾಗತ ಸಮಿತಿ ರೂಪೀಕರಣವು ಮಿತ್ತಬೈಲ್ ನ ಮುಹಿಯ್ಯುದ್ದೀನ್ ಕಮ್ಯುನಿಟಿ ಹಾಲ್ ನಲ್ಲಿ ನಡೆಯಿತು.

ದಾರುಸ್ಸಲಾಂ ಸೆಂಟರ್ ಅಧ್ಯಕ್ಷ ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ಸಭೆಯ ನೇತೃತ್ವ ವಹಿಸಿದ್ದರು.
ದಾರುಸ್ಸಲಾಂ ಸೆಂಟ್ರಲ್ ಕಮಿಟಿ ಜೊತೆ ಕಾರ್ಯದರ್ಶಿ ಹಮೀದ್ ಕಣ್ಣೂರು ಸಭೆಯಲ್ಲಿ ಭಾಗವಹಿಸಿದ ಎಲ್ಲರನ್ನು ಸ್ವಾಗತಿಸಿದರು. ಮಿತ್ತಬೈಲ್ ಕೇಂದ್ರ ಜುಮಾ ಮಸೀದಿಯ ಖತೀಬರಾದ ಅಬ್ದುಲ್ ರಝ್ಝಕ್ ನಿಝಾಮಿ ಸಭೆಯನ್ನು ಉದ್ಘಾಟಿಸಿದರು.

ಸ್ವಾಗತ ಸಮಿತಿಯ ನಿರ್ದೇಶಕರಾಗಿ ಶೈಖುನಾ ಅಬ್ದುಲ್ ಖಾದರ್ ಅಲ್ ಖಾಸಿಮಿ ಬಂಬ್ರಾಣ, ಶೈಖುನಾ ಉಸ್ಮಾನುಲ್ ಫೈಝಿ ತೋಡಾರ್, ಶೈಖುನಾ ಸುಲೈಮಾನ್ ಫೈಝಿ ಚುಂಗತ್ತರ, ಸಯ್ಯಿದ್ ಅಸ್ಗರ್ ಅಲೀ ತಂಙಳ್ ಯು.ಎ.ಇ, ಗೌರವಧ್ಯಕ್ಷರಾಗಿ ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ಬೆಳ್ತಂಗಡಿ, ಅಧ್ಯಕ್ಷರಾಗಿ ಸಾಗರ್ ಮುಹಮ್ಮದ್ ಹಾಜಿ ಮಿತ್ತಬೈಲ್, ಕಾರ್ಯಾಧ್ಯಕ್ಷಯಾಗಿ ಸಯ್ಯಿದ್ ಇಸ್ಮಾಯಿಲ್ ತಂಙಳ್ ಉಪ್ಪಿನಂಗಡಿ, ಪ್ರಧಾನ ಸಂಚಾಲಕರಾಗಿ ಡಿ.ಡಿ ಅಬ್ದುಲ್ ರಝ್ಝಕ್ ಹಾಜಿ ಕನ್ನಡಿಕಟ್ಟೆ, ಕೋಶಾಧಿಕಾರಿಯಾಗಿ ರಫೀಕ್ ಗಂಡಿಬಾಗಿಲು, ವರ್ಕಿಂಗ್ ಕನ್ವೀನರಾಗಿ ಅಬ್ದುಲ್ ಅಝೀಝ್ ಅಶ್ಶಾಫೀ,
ಉಪಾಧ್ಯಕ್ಷರಾಗಿ ಮೂಸಾ ದಾರಿಮಿ ಕಕ್ಕಿಂಜೆ, ಅಬ್ದುಲ್ ಖಾದರ್ ದಾರಿಮಿ ಕುಕ್ಕಿಲ, ಸಾಗರ್ ಮಜೀದ್ ಹಾಜಿ, ಸಿ.ಕೆ ಇಬ್ರಾಹಿಂ ಹಾಜಿ ಮೂಡಿಗೆರೆ, ಝುಬೈರ್ ದಾರಿಮಿ ಪೈಕ, ಅಹ್ಮದ್ ಹುಸೈನ್ ಮೂಡಬಿದ್ರೆ, ಸಹ ಸಂಚಾಲಕರಾಗಿ ರಫೀಕ್ ಫೈಝಿ ಕನ್ಯಾನ, ಇಸ್ಮಾಯಿಲ್ ಯಮಾನಿ ತಿಂಗಳಾಡಿ, ಅಯ್ಯುಬ್ ಕರಾಯ, ರಫೀಕ್ ಹೊಸಂಗಡಿ, ಶಾಕಿರ್ ರಾಜಧಾನಿ,ಯೂಸುಫ್ ಪೊಂಜಿಲ, ಮಜೀದ್ ಸರ್ ಮೆಲ್ಕಾರ್, ಫೈನಾನ್ಸಿಯಲ್ ಅಧ್ಯಕ್ಷರಾಗಿ ಲತೀಫ್ ಫೈಝಿ ಸುಂಕದಕಟ್ಟೆ, ಕನ್ವೀನರಾಗಿ ಅಶ್ರಫ್ ಮರೋಡಿ ಕೋಶಾಧಿಕಾರಿಯಾಗಿ ಯು.ಕೆ ಮೋನು ಕಕ್ಕಿಂಜೆ ನಿರ್ವಾಹಕ ಸಮಿತಿಯ ಅಧ್ಯಕ್ಷರಾಗಿ ಅಝೀಝ್ ಕಿಡ್ಸ್, ಸಂಚಾಲಕರಾಗಿ ಶರೀಫ್ ಕಲಾಯಿ, ಸಿರಾಜ್ ಚಿಲಿಂಬಿ ಅತಿಥಿ ಸ್ವೀಕಾರ ಸಮಿತಿಯ ಅಧ್ಯಕ್ಷರಾಗಿ ಬಶೀರ್ ದಾರಿಮಿ ನಾವೂರು, ಸಂಚಾಲಕರಾಗಿ ಅಬ್ದುಲ್ ರಹಿಮಾನ್ ಹಾಜಿ ಸಿಟಿ ಲ್ಯಾಂಡ್, ಸ್ವಯಂ ಸೇವಕರ ಸಮಿತಿಯ ಅಧ್ಯಕ್ಷರಾಗಿ ಲತೀಫ್ ಕರಾಯ, ಸಂಚಾಲಕರಾಗಿ ಲತೀಫ್ ಪಾಂಡವರಕಲ್ಲು ಮಾಧ್ಯಮ ಸಮಿತಿಯ ಅಧ್ಯಕ್ಷರಾಗಿ ನಿಯಾಝ್ ನಿಝಾಮಿ ಪರಪ್ಪು, ಮುಹಮ್ಮದ್ ಇಸ್ಹಾಕ್ ಕೌಸರಿ ಪರ್ಲೋಟ್ಟು ಹಾಗೂ ಇತರೆ ವಿಭಾಗದ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಝಕರಿಯಾ ಫೈಝಿ ಮಾಡನ್ನೂರು ವಂದಿಸಿದರು.

Related posts

ಕೊಕ್ಕಡ ಚಲಿಸುತ್ತಿದ್ದ ಬಸ್ ಮೇಲೆ ಬಿದ್ದ ವಿದ್ಯುತ್ ಕಂಬ

Suddi Udaya

ವೇಣೂರು ಸರಕಾರಿ ಪ.ಪೂ. ಕಾಲೇಜು ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಫೆ.3-7: ಶ್ರೀ ಕ್ಷೇತ್ರ ಓಡೀಲು ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳ ರೆಡ್ ಕಲರ್ ಸಂಭ್ರಮ

Suddi Udaya

ಬಾರ್ಯ, ತೆಕ್ಕಾರು, ಪುತ್ತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ವಿಜ್ಞಾಪನಾ ಪತ್ರ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!