ಬೆಳ್ತಂಗಡಿ: ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಸರಕಾರಿ ಪ್ರೌಢ ಶಾಲೆ ಸವಣಾಲಿನ 40 ಮಂದಿ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ವಿತರಿಸಲಾಯಿತು.
ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಪ್ರಶಾಂತ್ ಎಲ್. ವಹಿಸಿದ್ದರು. ಅತಿಥಿಗಳಾಗಿ ತಾ.ಪಂ ಮಾಜಿ ಅಧ್ಯಕ್ಷ ಬಾಲಕೃಷ್ಣ ವಿ.ಶೆಟ್ಟಿ ಸಾಲಿಗ್ರಾಮ, ಕಿಶೋರ್ ಕುಮಾರ್ ಎರ್ಮೆತ್ತೋಡಿ, ಸುಬ್ರಹ್ಮಣ್ಯ ಭಟ್ ಗುತ್ತಿನಬೈಲು, ಗ್ರಾ.ಪಂ ಮಾಜಿ ಸದಸ್ಯೆ ಶ್ರೀಮತಿ ಜಯಲಕ್ಷ್ಮೀ, ಬೆಳ್ತಂಗಡಿ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಗಣೇರ್ಶ ಭಂಡಾರಿ, ನಿರ್ದೇಶಕರಾದ ಮುನಿರಾಜ ಅಜ್ರಿ, ಪುರಂದರ, ನಾರಾಯಣ ಆಚಾರ್ಯ, ಅಶೋಕ್ ರೈ, ತಿಮ್ಮಯ್ಯ ನಾಯ್ಕ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಸಾದ್ ಎಸ್ ಉಪಸ್ಥಿತರಿದ್ದರು.














