July 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು: ಸಹೋದರರಿಬ್ಬರಿದ್ದ ಬೈಕ್ ಗೆ ಗೂಡ್ಸ್ ರಿಕ್ಷಾ ಡಿಕ್ಕಿ: ಓರ್ವ ಸ್ಥಳದಲ್ಲೇ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

ವೇಣೂರು: ದ್ವಿಚಕ್ರ ವಾಹನಕ್ಕೆ ಗೂಡ್ಸ್ ರಿಕ್ಷಾ ಡಿಕ್ಕಿಯೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ವೇಣೂರು ಪೊಲೀಸ್‌ ಠಾಣಾ ವ್ಯಾಪ್ತಿಯ ರಾಜ್ಯ ಹೆದ್ದಾರಿ ನಿಟ್ಟಡೆ ಬಳಿ ಜು. 5ರ ರಾತ್ರಿ ನಡೆದಿದೆ.

ವೇಣೂರು ಗ್ರಾ.ಪಂ. ವ್ಯಾಪ್ತಿಯ ಕರಿಮಣೇಲು ಗ್ರಾಮದ ಗಾಂಧಿನಗರ ತಿಮರಡ್ಡ ಮನೆ ನಿವಾಸಿ ರವೀಂದ್ರ ಮೂಲ್ಯ (47ವ) ಈ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಮತ್ತೋರ್ವ ಸಹೋದರ ಜಗದೀಶ್ ಮೂಲ್ಯ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಹಿನ್ನೆಲೆ:
ಗಾರೆ ಕೆಲಸ ಮಾಡಿಕೊಂಡಿದ್ದ ಸಹೋದರರು ಕೆಲಸ ಮುಗಿಸಿ ದ್ವಿಚಕ್ರ ವಾಹನದಲ್ಲಿ ಗುರುವಾಯನಕೆರೆಯಿಂದ ವೇಣೂರು ಕಡೆಗೆ ಬರುತ್ತಿದ್ದ ವೇಳೆ ವೇಣೂರಿನಿಂದ ಹೋಗುತ್ತಿದ್ದ ಗೂಡ್ಸ್ ರಿಕ್ಷಾ ನಿಟ್ಟಡೆಯ ಕುಂಭಶ್ರೀ ಶಾಲಾ ಬಳಿ ಮುಖಾಮುಖಿ ಡಿಕ್ಕಿಯೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಪಲ್ಟಿಯಾಗಿದ್ದು, ರವೀಂದ್ರ ಮೂಲ್ಯ ಅವರ ತಲೆಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದರೆ. ಜಗದೀಶ್ ಮೂಲ್ಯ ಅವರಿಗೆ ಕಾಲುಗಳಿಗೆ ಬಲವಾದ ಗಾಯಗಳಾಗಿವೆ. ರಿಕ್ಷಾ ಚಾಲಕ ಹಾಗೂ ಸ್ಥಳೀಯರು ಸೇರಿ ಗಾಯಾಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾಗಿದ್ದಾರೆ.

ವೇಣೂರಿನಲ್ಲಿ ತರಕಾರಿ ಅಂಗಡಿ ನಡೆಸುತ್ತಿರುವ ಪುತ್ತುಮೋನು ಎಂಬವರ ಗೂಡ್ಸ್ ರಿಕ್ಷಾ ಆಗಿದ್ದು, ರಾತ್ರಿ ಅಂಗಡಿಯಿಂದ ಕೆಲಸ ಮುಗಿಸಿ ಮನೆಗೆ ಕಡೆಗೆ ತೆರಳುತ್ತಿದ್ದು, ನಿಟ್ಟಡೆಯಲ್ಲಿ ಹೆದ್ದಾರಿಯಲ್ಲಿದ್ದ ಸಣ್ಣ ಗುಂಡಿಯೊಂದನ್ನು ತಪ್ಪಿಸುವ
ಈ ದುಘ೯ಟನೆ ನಡೆದಿದೆ ಎನ್ನಲಾಗಿದೆ.
ಮೃತ ರವೀಂದ್ರ ಅವರು ತಾಯಿ ಬಾಗಿ, ಪತ್ನಿ ಭವಾನಿ, ಪುತ್ರ ಸ್ವಸ್ತಿಕ್, ಸಹೋದರರು, ಸಹೋದರಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಆರ್ಥಿಕ ಹೊರೆಯಿಂದಾಗಿ ಅಭಿವೃದ್ಧಿಗೆ ಗ್ಯಾರಂಟಿಗಳು ಹೊಡೆತ: ರಾಜ್ಯವು ಆರ್ಥಿಕ ದಿವಾಳಿಯತ್ತ: ಪ್ರತಾಪಸಿಂಹ ನಾಯಕ್

Suddi Udaya

ರಾಜ್ಯಮಟ್ಟದ ಹ್ಯಾಂಡ್‌ಬಾಲ್ : ಉಜಿರೆಯ ಎಸ್.ಡಿ.ಎಂ ಗೆ ಅವಳಿ ಪ್ರಶಸ್ತಿ

Suddi Udaya

ವಾಣಿ ಆಂ.ಮಾ. ಶಾಲಾ ವಿದ್ಯಾರ್ಥಿ ಶಮಾಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಪುರಸ್ಕಾರ ಪ್ರಶಸ್ತಿ

Suddi Udaya

ಬಂದಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಪದ್ಮುಂಜ :ಕೊಲ್ಲಾಜೆ ಕಾಂಪ್ಲೆಕ್ಸ್ ಮಾಲಕ ನಾರಾಯಣ ರಾವ್ ಕೊಲ್ಲಾಜೆ ನಿಧನ

Suddi Udaya

ಎಸೆಸೆಲ್ಸಿ ಪರೀಕ್ಷೆ -2: ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಸಹನಾ ರಾವ್ ರಾಜ್ಯಕ್ಕೆ ದ್ವಿತೀಯ

Suddi Udaya
error: Content is protected !!