23.3 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ಎಸ್.ಡಿ.ಎಂ. ಪಾಲಿಟೆಕ್ನಿಕ್‌ನಲ್ಲಿ ‘ಎಸ್.ಡಿ.ಎಂ. ಕುರಿತು ಒಳನೋಟ’ ವಿಶೇಷ ಉಪನ್ಯಾಸ ಕಾರ್ಯಕ್ರಮ

ಉಜಿರೆ: 2026-27 ರ ಪ್ರವೇಶೋತ್ಸವ ಕಾರ್ಯಕ್ರಮದ ಎರಡನೇ ದಿನವಾದ ಜು.1ರಂದು, ಉಜಿರೆಯ ಎಸ್.ಡಿ.ಎಂ. ಪಾಲಿಟೆಕ್ನಿಕ್‌ನ ಕಾರ್ಯಾಗಾರ (ವರ್ಕ್‌ಶಾಪ್) ಸೆಮಿನಾರ್ ಹಾಲ್‌ನಲ್ಲಿ ‘ಎಸ್.ಡಿ.ಎಂ. ಕುರಿತು ಒಳನೋಟ (An Insight to SDM)’ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRDP) ಯ ನಿರ್ದೇಶಕ ಪ್ರದೀಪ್ ಶೆಟ್ಟಿ ಭಾಗವಹಿಸಿ, ಎಸ್.ಡಿ.ಎಂ. ಸಂಸ್ಥೆಯ ಪರಂಪರೆ, ಧ್ಯೇಯ ಹಾಗೂ ಸಮಾಜಮುಖಿ ಸೇವಾ ತತ್ವಗಳ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ಪರಿಚಯಿಸಿದರು. ತಮ್ಮ ಉಪನ್ಯಾಸದಲ್ಲಿ ಅವರು ಎಸ್.ಡಿ.ಎಂ.ನ ‘ಚತುರ್ಧಾನ’ ಸಂಸ್ಕೃತಿಯನ್ನು ವಿವರಿಸಿ, ಅನ್ನದಾನ, ವಿದ್ಯಾದಾನ, ಆರೋಗ್ಯದಾನ ಹಾಗೂ ಅಭಯದಾನ ಎಂಬ ನಾಲ್ಕು ಪ್ರಮುಖ ಮೌಲ್ಯಗಳ ಮೂಲಕ ಎಸ್.ಡಿ.ಎಂ. ಸಂಸ್ಥೆಯು ಸಮಾಜ ಸೇವೆ, ಮಾನವೀಯ ಮೌಲ್ಯಗಳು ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಸಲ್ಲಿಸುತ್ತಿರುವ ಮಹತ್ವದ ಕೊಡುಗೆಯನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಎಸ್.ಡಿ.ಎಂ.ನ ಆದರ್ಶಗಳು ಮತ್ತು ಮೌಲ್ಯಗಳನ್ನು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ಪ್ರದೀಪ್ ಶೆಟ್ಟಿ ಅವರನ್ನು ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳು ಎಸ್.ಡಿ.ಎಂ.ನ ಸೇವಾ ಪರಂಪರೆ, ಮೌಲ್ಯಾಧಾರಿತ ಶಿಕ್ಷಣ ಮತ್ತು ಸಮಾಜಮುಖಿ ಕಾರ್ಯಚಟುವಟಿಕೆಗಳ ಕುರಿತು ಆಳವಾದ ಅರಿವನ್ನು ಪಡೆದರು.

ಕಾರ್ಯಕ್ರಮವನ್ನು ಸಿವಿಲ್ ಇಂಜಿನಿಯರಿಂಗ್ ವಿಭಾಗದ ಉಪನ್ಯಾಸಕ ಈಶ್ವರ್ ಶರ್ಮ ನಿರೂಪಿಸಿದರು.

Related posts

ಇಳಂತಿಲ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಸ್ ಎಸ್ ಎಲ್ ಸಿ ವಿಧ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜು ಫೈರ್ ಅಂಡ್ ಸೇಫ್ಟಿ ವಿಭಾಗದ ವಿದ್ಯಾರ್ಥಿಗಳಿಂದ ಅಗ್ನಿಶಾಮಕ ಘಟಕಕ್ಕೆ ಶೈಕ್ಷಣಿಕ ಭೇಟಿ

Suddi Udaya

ಮೊಗ್ರು: ಕಂಚಿನಡ್ಕ ದಲ್ಲಿ ಗುಡ್ಡ ಕುಸಿತ: ಬಿರುಕು ಬಿಟ್ಟ ಮನೆ: ಸಂಪೂರ್ಣ ಹಾನಿ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಪ್ರತಿನಿಧಿಸಿದ ತಂಡ ರಾಷ್ಟ್ರಮಟ್ಟದಲ್ಲಿ ಪ್ರಥಮ

Suddi Udaya

ವರ್ತಕರ ಸಂಘದಿಂದ ನೂತನ ಡಿ.ವೈ.ಎಸ್.ಪಿ. ಸಿ.ಕೆ ರೋಹಿಣಿ ಯವರಿಗೆ ಅಭಿನಂದನೆ

Suddi Udaya

ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸೇವಾ ನಿವೃತ್ತಿ; ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ಶುಭಹಾರೈಕೆ

Suddi Udaya
error: Content is protected !!