ಉಜಿರೆ: ಆಸರೆ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘ ಉಜಿರೆ ಇವರ ವತಿಯಿಂದ ರುಡ್ಸೆಟ್ ಸಂಸ್ಥೆ, ಉಜಿರೆಯಲ್ಲಿ ನಡೆದ “ಆಟಿಕೂಟ” ಕಾರ್ಯಕ್ರಮವು ಆಟಿ ತಿಂಗಳ ಸಾಂಪ್ರದಾಯಿಕ ತಿನಿಸುಗಳು ಹಾಗೂ ನಾಟಿ ವೈದ್ಯ ರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಹಿರಿಯ ನಾಟಿ ವೈದ್ಯ ರಾದ ಶ್ರೀನಿವಾಸ ಪೂಜಾರಿ ಪೆರ್ಮುದೆ, ಕೊಯ್ಯೂರು ಭಾಗವಹಿಸಿ, ಆಟಿ ತಿಂಗಳ ತಿನಿಸುಗಳು ಮತ್ತು ನಾಟಿ ಜೀವನದ ಮಹತ್ವದ ಕುರಿತು ಮಾತನಾಡಿದರು. ಆಟಿ ತಿಂಗಳಲ್ಲಿ ಆರೋಗ್ಯಕರ ಆಹಾರ ಸೇವನೆಯ ಮಹತ್ವವನ್ನು ವಿವರಿಸಿದ ಅವರು, ಪೌಷ್ಟಿಕಾಂಶಯುಕ್ತ ಸಾಂಪ್ರದಾಯಿಕ ಆಹಾರಗಳು ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಆಸರೆ ಸದಸ್ಯರು ತಯಾರಿಸಿ ತಂದ ವಿವಿಧ ಬಗೆಯ ಆಟಿ ತಿಂಗಳ ವಿಶೇಷ ತಿನಿಸುಗಳನ್ನು ಸವಿದು ಸಂಭ್ರಮಿಸಿದರು. ಆಟಿ ತಿಂಗಳ ಆಚರಣೆಗಳ ಹಿಂದಿರುವ ವೈಜ್ಞಾನಿಕ ಹಾಗೂ ಸಾಂಸ್ಕೃತಿಕ ಮಹತ್ವದ ಕುರಿತು ಅಭಿಪ್ರಾಯಗಳನ್ನು ಹಂಚಿಕೊಳ್ಳಲಾಯಿತು.
ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್, ಕೆ. ಕರುಣಾಕರ ಜೈನ್ ಶ್ರೀಮತಿ ಅನಸೂಯಾ ರೈ ಹಾಗೂ ಸುರೇಶ್ ಗೌಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆಸರೆ ಸಂಘದ ಅಧ್ಯಕ್ಷರಾದ ಪ್ರಶಾಂತ್ ಕುದ್ಯಾಡಿ ಸ್ಬಾಗತಿಸಿ, ಧನ್ಯವಾದ ಸಲ್ಲಿಸಿದರು. ಕಾರ್ಯಕ್ರಮ ವನ್ನು ಗೌತಮ್ ಕುಕ್ಕಾನ್ ನಿರ್ವಹಿಸಿದರು.














